ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಹಮಾಸ್ ಉಗ್ರರಿಂದ ಇಸ್ರೇಲ್ ಮೇಲೆ ದಾಳಿ:   ಪರಿಸ್ಥಿತಿ ಉದ್ವಿಗ್ನ: ಯುದ್ಧ ಘೋಷಣೆ.

ಟೆಲ್ ಅವಿವ್:  ಪ್ಯಾಲೆಸ್ಟೀನ್‌ ನ ಹಮಾಸ್ ಉಗ್ರರು ಗಾಜಾದಿಂದ ಇಸ್ರೇಲ್ ಕಡೆಗೆ ಇಂದು ಬೆಳಗ್ಗೆ ರಾಕೆಟ್ ದಾಳಿ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಜಾ ಪಟ್ಟಿಯಿಂದ ಇಸ್ರೇಲ್  ಅನೇಕ ವಸತಿ ಪ್ರದೇಶಗಳ ಮೇಲೆ ರಾಕೆಟ್ ದಾಳಿ ನಡೆಸಲಾಗಿದ್ದು . ಹಮಾಸ್ ಉಗ್ರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ.

ರಾಜಧಾನಿ ಟೆಲ್ ಅವಿವ್ ಸೇರಿದಂತೆ ಅನೇಕ ಕಡೆ ಸೈರನ್ ಸಹಾಯದಿಂದ ವೈಮಾನಿಕ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ.

Related posts

ಮಹಿಳಾ ಮೀಸಲಾತಿ ಯೋಜನೆ ಮಸೂದೆ ಮಂಡನೆ: ಐತಿಹಾಸಿಕ ತೀರ್ಮಾನ- ಕೆಎಸ್ ಈಶ್ವರಪ್ಪ.

ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳುವಂತೆ ಉದಯನಿಧಿ ಸ್ಟಾಲಿನ್ ಗೆ ಪ್ರಮೋದ್ ಮುತಾಲಿಕ್ ಆಗ್ರಹ.

ಬರ ಘೋಷಣೆ ನಿಯಮ ಪರಿಷ್ಕರಿಸಿ- ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ.