ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಸರ್ಕಾರಿ ಪ್ರಾಯೋಜಿತದ ದಾಳಿಕೋರರಿಂದ ನಮ್ಮ ಫೋನ್ ಗಳ ಹ್ಯಾಕ್ ಮಾಡಲು ಯತ್ನ: ವಿಪಕ್ಷಗಳಿಂದ ಗಂಭೀರ ಆರೋಪ

ನವದೆಹಲಿ: ಸರ್ಕಾರಿ ಪ್ರಾಯೋಜಿತದ ದಾಳಿಕೋರರು ತಮ್ಮ ಫೋನ್ ಗಳ ಹ್ಯಾಕ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ಸಂಸದರು ಹಾಗೂ ನಾಯಕರು ಇಂದು ಗಂಭೀರ ಆರೋಪ ಮಾಡಿದ್ದಾರೆ.

”ರಾಜ್ಯ ಪ್ರಾಯೋಜಿತ ದಾಳಿಕೋರರು ತಮ್ಮ ಫೋನ್ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ” ಎಂಬ ಎಚ್ಚರಿಕೆ ಸಂದೇಶವನ್ನು ತಮ್ಮ ಫೋನ್ ತಯಾರಕರಿಂದ ಸ್ವೀಕರಿಸಿರುವುದಾಗಿ ಕಾಂಗ್ರೆಸ್, ಟಿಎಂಸಿ, ಆಮ್ ಆದ್ಮಿ ಪಕ್ಷ, ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕರು ಆರೋಪಿಸಿದ್ದಾರೆ .

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಉದ್ಧವ್ ಠಾಕ್ರೆ ಬಣದ ಶಿವಸೇನೆಯ ರಾಜ್ಯಸಭೆ ಸದಸ್ಯೆ ಪ್ರಿಯಾಂಕಾ ಚತುರ್ವೇದಿ, ಕಾಂಗ್ರೆಸ್ ನಾಯಕರಾದ ಸಂಸದ ಶಶಿ ತರೂರ್ ಮತ್ತು ಪವನ್ ಖೇರಾ, ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಳವಣಿಗೆಯ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಫೋನ್ಗೆ ಆಯಪಲ್ ಸಂಸ್ಥೆಯಿಂದ ಸ್ವೀಕರಿಸಿದ ಎಚ್ಚರಿಕೆ ಸಂದೇಶಗಳ ಸ್ಕ್ರೀನ್ಶಾಟ್ಗಳನ್ನು ಪೋಸ್ಟ್ ಮಾಡಿದ್ದಾರೆ.

”ನಾನು ವೆರಿಫೈಟ್ ಆಯಪಲ್ ಐಡಿ ಹಾಗೂ ಇ-ಮೇಲ್ನಿಂದ ಸಂದೇಶ ಸ್ವೀಕರಿಸಿದ್ದೇನೆ. ಇದರ ಸತ್ಯಾಸತ್ಯತೆ ದೃಢಪಡಿಸಲಾಗಿದೆ. ನನ್ನಂತಹ ತೆರಿಗೆದಾರರ ವೆಚ್ಚದಲ್ಲಿ ನಿರುದ್ಯೋಗಿ ಅಧಿಕಾರಿಗಳನ್ನು ಕಾರ್ಯ ನಿರತವಾಗಿರಿಸಲು ಸಂತೋಷವಾಗಿದೆ!. ಇದಕ್ಕಿಂತ ಮಾಡಲು ಹೆಚ್ಚು ಮುಖ್ಯವಾದೇನೂ ಇಲ್ಲವೇ?” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ‘ಎಕ್ಸ್’ನಲ್ಲಿ ಫೋಸ್ಟ್ ಮಾಡಿದ್ದಾರೆ.

ಸರ್ಕಾರವು ನನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ನನಗೆ ಎಚ್ಚರಿಕೆ ನೀಡುವ ಸಂದೇಶ ಮತ್ತು ಇಮೇಲ್ ಸಂದೇಶವನ್ನು ಆಯಪಲ್ನಿಂದ ಸ್ವೀಕರಿಸಲಾಗಿದೆ” ಎಂದು ಟಿಸಿಎಂ ಸಂಸದೆ ಮಹುವಾ ಮೊಯಿತ್ರಾ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದುಕೊಂಡು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದಾರೆ. ಮುಂದುವರೆದು, ”ಅದಾನಿ ಮತ್ತು ಪಿಎಂಒ ಬುಲ್ಲೀಸ್ (ಹೆದರಿಸುವವರು) – ನಿಮ್ಮ ಭಯವು ನನಗೆ ನಿಮ್ಮ ಮೇಲೆ ಕರುಣೆಯನ್ನುಂಟು ಮಾಡುತ್ತದೆ” ಎಂದು ಮೊಯಿತ್ರಾ ಹೇಳಿದ್ದಾರೆ.

ರಾಜ್ಯಸಭೆ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಸಹ ಎಚ್ಚರಿಕೆ ಸಂದೇಶಗಳ ಸ್ಕ್ರೀನ್ಶಾಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ”ಕಳೆದ ರಾತ್ರಿ ನಾನು ಎಚ್ಚರಿಕೆ ಸ್ವೀಕರಿಸಿದ್ದೇನೆ. ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯವಾಗಿದೆ. ನಾನು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ ಎಂದು ತೋರಿಸುತ್ತದೆ. ಈ ದಾಳಿಗಳು ‘ರಾಜ್ಯ ಪ್ರಾಯೋಜಿತ’ ಎಂದು ಎಚ್ಚರಿಕೆ ಸ್ಪಷ್ಟವಾಗಿ ಹೇಳುತ್ತದೆ. ವಿರೋಧ ಪಕ್ಷದ ನಾಯಕರಿಗೆ ಮಾತ್ರ ಇಂತಹ ಸಂದೇಶಗಳು ಏಕೆ ಬರುತ್ತಿವೆ?, ನಮ್ಮ ಮೇಲೆ ದೊಡ್ಡ ಮಟ್ಟದ ಕಣ್ಗಾವಲು ನಡೆಯುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

 

Related posts

ಗಿರಿಜನರಿಗೆ ಅರಣ್ಯ ಹಕ್ಕುಪತ್ರ

TOD News

ನಿಗಮ ಮಂಡಳಿ ನೇಮಕ : ಡಿಕೆಶಿವಕುಮಾರ್  ನಮ್ಮ ಅಧ್ಯಕ್ಷರು. ಅದು ಅವರ ತೀರ್ಮಾನ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಫಾರ್ಮಸಿ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಜೀವ ಉಳಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ-ಎಸ್.ಎನ್.ನಾಗರಾಜ