ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೆಎಸ್ ​ಆರ್ ​ಟಿಸಿ ವಿಶೇಷ ಪಲ್ಲಕ್ಕಿ ಬಸ್ ​ಗಳಿಗೆ  ಸಿಎಂ ಸಿದ್ದರಾಮಯ್ಯ ಚಾಲನೆ: ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತಿ.

ಬೆಂಗಳೂರು,:  ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕೆಎಸ್​ ಆರ್​ ಟಿಸಿ ಪಲ್ಲಕ್ಕಿ ಬಸ್​ಗಳನ್ನ ಲೋಕಾರ್ಪಣೆ ಮಾಡಿದರು.

ಪಲ್ಲಕ್ಕಿ ಉತ್ಸವ ಹೆಸರಿನ 40 ನಾನ್ ಎಸಿ ಸ್ಲೀಪರ್ ಬಸ್​ಗೆ ಗ್ರೀನ್ ಸಿಗ್ನಲ್ ನೀಡಲಾಯತು. ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು 148 ಬಸ್ಸುಗಳ ಪೈಕಿ 100 ಬಸ್​ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, 44 ಎಸಿ ಸ್ಲೀಪರ್ ​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. 4 ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು.

Related posts

ಭಾರತ-ಕೆನಡಾ ನಡುವೆ ವಿವಾದದ ಎಫೆಕ್ಟ್: ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆ!

ಕ್ರೀಡೆಯಿಂದ ದೈಹಿಕ ಮಾನಸಿಕ ಆರೋಗ್ಯ ವೃದ್ಧಿ-ಸರ್ಜಿ ಫೌಂಡೇಶನ್ ನ ಡಾ. ಧನಂಜಯ್ ಸರ್ಜಿ

ಕರಾಟೆ ಪಂದ್ಯಾವಳಿ – 2023: ಪ್ರೀತಮ್ .ವಿ ಮತ್ತು ಶೀತಲ್ ಗೆ ಪ್ರಥಮ ಸ್ಥಾನ.