ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಂಭ್ರಮ ಸಡಗರದಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ರಾಜಬೀದಿ ಉತ್ಸವ: ತುಂಗಾ ನದಿಯಲ್ಲಿ ವಿಸರ್ಜನೆ.

ಶಿವಮೊಗ್ಗ: ನ್ಯೂಮಂಡ್ಲಿಯಲ್ಲಿರುವ ಅನ್ನಪೂರ್ಣೇಶ್ವರಿ ಬಡಾವಣೆಯ ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ರಾಜಬೀದಿ ಉತ್ಸವ ಅತ್ಯಂತ ಸಂಭ್ರಮ ಸಡಗರದಿಂದ ನಡೆದು ಗಣಪತಿಯನ್ನು ಅರಕೆರೆಯ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಗಣಪತಿ ಪ್ರತಿಷ್ಠಾಪನೆ ನಂತರ ಪ್ರತಿದಿನವೂ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು, ಗುರುವಾರ ನಡೆದ ಮೆರವಣಿಗೆಯಲ್ಲಿ ಡೊಳ್ಳು ಸೇರಿದಂತೆ ಕಲಾ ತಂಡಗಳು ಭಾಗವಹಿಸಿದ್ದವು. ಅನ್ನ ಸಂತರ್ಪಣೆ ನಡೆಸಲಾಯಿತು.
ಬಿಜೆಪಿಯ ಯುವ ಮುಖಂಡ ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ರಾಜ ಬೀದಿ ಉತ್ಸವದಲ್ಲಿ ಶಿವರಾಜ್, ಮೋಹನ್, ಭರತ್, ಸಾಗರ್, ಕಿರಣ್ ಮೊದಲಾದವರು ಭಾಗವಹಿಸಿದ್ದರು.

Related posts

ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ: ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ.

ಕಾವೇರಿ ನದಿ ನೀರಿಗೆ ತಮಿಳುನಾಡು ಕ್ಯಾತೆ: ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕರ್ನಾಟಕ

ಶುದ್ಧ ಹಸ್ತದ ಆಡಳಿತದಿಂದ ಬ್ಯಾಂಕಿನ ಏಳಿಗೆ ಸಾಧ್ಯ. ಬಿ ವೈ ರಾಘವೇಂದ್ರ