ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹುಟ್ಟುಹಬ್ಬ: ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರಿಂದ ಆಚರಣೆ.

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರ ಹುಟ್ಟುಹಬ್ಬವನ್ನು ಭಾನುವಾರ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಿದರು.
ಬೆಳಿಗ್ಗೆ ಗೋಪಾಳದ ದ್ರೌಪದಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನ್ನಸಂತರ್ಪಣೆ ನಡೆಸಲಾಯಿತು.

ಅಲ್ಲದೆ ಸಹ್ಯಾದ್ರಿ ಕಾಲೇಜಿನ ಹತ್ತಿರದ ಅಲೆಮಾರಿ ಕ್ಯಾಂಪಿನಲ್ಲಿ ಅನ್ನಸಂತರ್ಪಣೆ ನಡೆಸಿ ಅವರ ಯೋಗಕ್ಷೇಮ ವಿಚಾರಿಸಲಾಯಿತು. ಗೋಪಾಳದ ಜೀವನಸಂಜೆ ವೃದ್ಧಾಶ್ರಮದಲ್ಲಿ ಮತ್ತು ಆಲ್ಕೊಳದ ತಾಯಿಮನೆ, ಕಾಶಿಪುರದ ಗುಡ್‍ಲಕ್ ಆರೈಕೆ ಕೇಂದ್ರ, ಮಿಷನ್ ಕಾಂಪೌಂಡಿನ ಹ್ಯಾಪಿಹೋಂ, ಆಶಾ ಕಿರಣದ ಮಕ್ಕಳೊಂದಿಗೆ ಭಾಗವಹಿಸಿ ಎಲ್ಲರ ಯೋಗಕ್ಷೇಮ ವಿಚಾರಿಸಿ ಅಭಿಮಾನಿಗಳು ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿದರು.
ಮಧ್ಯಾಹ್ನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ಅವರ ನೇತೃತ್ವದಲ್ಲಿ ನೂರಾರು ಮಹಿಳೆಯರಿಗೆ ಬಾಗಿನ ನೀಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಿರಿಯರು, ಕಾರ್ಯಕರ್ತರು, ಅಭಿಮಾನಿಗಳು ಸುಂದರೇಶ್ ಅವರನ್ನು ಅಭಿನಂದಿಸಿ ಕೇಕ್ ಕತ್ತರಿಸಿ ಸಂಭ್ರಮಾಚರಿಸಿದರು.
ಸಂಭ್ರಮಾಚರಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

Related posts

ಮಹಿಳಾ ಮೀಸಲಾತಿ ಯೋಜನೆ ಮಸೂದೆ ಮಂಡನೆ: ಐತಿಹಾಸಿಕ ತೀರ್ಮಾನ- ಕೆಎಸ್ ಈಶ್ವರಪ್ಪ.

ರೈತರ ಆತ್ಮಹತ್ಯೆ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್‍ರನ್ನು ಸಂಪುಟದಿಂದ ವಜಾ ಮಾಡಿ-ಕೆ.ಎಸ್. ಈಶ್ವರಪ್ಪ ಆಗ್ರಹ.

ಕಾಡು, ವನ್ಯಜೀವಿಗಳ ರಕ್ಷಣೆ ಪ್ರತಿಯೊಬ್ಬರ ಸಾಂವಿಧಾನಿಕಕರ್ತವ್ಯ: ಪಟಗಾರ್