ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸೆ.7ರಂದು ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಭಾರತ್ ಜೋಡೋ ಯಾತ್ರೆ ಆಚರಣೆ ಕಾರ್ಯಕ್ರಮ

ಶಿವಮೊಗ್ಗ: ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಸೆ.7ರ ಸಂಜೆ 5 ಗಂಟೆಗೆ ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಜಿಲ್ಲಾ ಮಟ್ಟದ ಭಾರತ್ ಜೋಡೋ ಯಾತ್ರೆ ಆಚರಣೆ ಕಾರ್ಯಕ್ರಮ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ತಿಳಿಸಿದ್ದಾರೆ.
ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ನೇತೃತ್ವದಲ್ಲಿ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ನಡೆದಿತ್ತು. ಇದರ ಸ್ಮರಣೆಗಾಗಿ ಬಿ.ಹೆಚ್. ರಸ್ತೆಯ ಶಿವಪ್ಪ ನಾಯಕ ಪ್ರತಿಮೆಯ ಎದುರಿನಿಂದ ಯಾತ್ರೆ ಆರಂಭವಾಗಿ ಎಎ ಸರ್ಕಲ್, ನೆಹರು ರಸ್ತೆ, ಸೀನಪ್ಪಶ್ರೇಷ್ಠಿ ವೃತ್ತಕ್ಕೆ ಸಾಗಿ ಅಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕರಾದ ಬಿ.ಕೆ. ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ಮಾಜಿ ಶಾಸಕರಾದ ಆರ್. ಪ್ರಸನ್ನಕುಮಾರ್,ಹೆಚ್.ಎಂ. ಚಂದ್ರಶೇಖರಪ್ಪ, ಆಯನೂರು ಮಂಜುನಾಥ್, ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್, ಪ್ರಮುಖರಾದ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ, ಹೆಚ್.ಸಿ. ಯೋಗೇಶ್, ಡಾ. ಶ್ರೀನಿವಾಸ ಕರಿಯಣ್ಣ, ಇಸ್ಮಾಯಿಲ್ ಖಾನ್, ಕಲಗೋಡು ರತ್ನಾಕರ್, ಪಿ.ಒ. ಶಿವಕುಮಾರ್, ಸೇರಿದಂತೆ ಅನೇಕ ಗಣ್ಯರು, ಭಾಗವಹಿಸಲಿದ್ದಾರೆ.
ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಚಂದ್ರಭೂಪಾಲ್ ಕೋರಿದ್ದಾರೆ.

Related posts

ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘದಿಂದ ಸದಸ್ಯರಿಗೆ ಶೇ.23ರಷ್ಟು ಲಾಭಾಂಶ ಘೋಷಣೆ.

ಕಾಂಗ್ರೆಸ್ ಪರ ಅಲೆ: ಕರ್ನಾಟಕದಂತೆಯೇ ಪಂಚ ರಾಜ್ಯ ಚುನಾವಣೆಯಲ್ಲೂ ಬಿಜೆಪಿಗೆ ಸಂಕಷ್ಟ…?

ರಾಜ್ಯದಲ್ಲಿ ನೀರಿನ ಸಂಕಷ್ಟ: ಮಳೆಗಾಗಿ ಮಲೆ ಮಹದೇಶ್ವರ ಮೊರೆ ಹೋದ ಸಿಎಂ ಸಿದ್ಧರಾಮಯ್ಯ