ಬೆಂಗಳೂರು,: ಐದು ವರ್ಷ ನಾನೇ ಸಿಎಂ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೆ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಹಲವು ಸಚಿವರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಂ ಬದಲಾವಣೆ ಏನು ಕೇಳಬೇಡಿ ಈ ಬಗ್ಗೆ ನಾನು ಮಾತನಾಡಲ್ಲ ಎಂದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ನನ್ನ ಇಲಾಖೆ ಬಗ್ಗೆ ಕೇಳಿ ಹೇಳುತ್ತೇನೆ. ಸರ್ಕಾರ ಪೊಲೀಸ್ ಇಲಾಖೆ ಬಗ್ಗೆ ಮಾತನಾಡುತ್ತೇನೆ. ಆದರೆ ಸಿಎಂ ಬದಲಾವಣೆ ವಿಚಾರ ಮಾತನಾಡಲ್ಲ ದಯವಿಟ್ಟು ಆ ವಿಚಾರದ ಬಗ್ಗೆ ಏನು ಕೇಳಬೇಡಿ ಎಂದರು.
ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲ ಇಲ್ಲ ಸುಮ್ಮನೇ ಹೇಳಿಕೆ ಕೊಟ್ಟರೇ ಅದು ಗೊಂದಲ ಅಲ್ಲ. ದಲಿತ ಸಿಎಂ ವಿಚಾರ ಗೊತ್ತಿಲ್ಲ ಎಂದು ಪರಮೇಶ್ವರ್ ತಿಳಿಸಿದರು.