ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಡಿ.ಕೆ ಶಿವಕುಮಾರ್ ಆಪ್ತ ಆರ್.ಎಂ ಮಂಜುನಾಥ್ ಗೌಡ ಅವರ ನಿವಾಸದ ಮೇಲೆ ಇಡಿ ದಾಳಿ.

ಶಿವಮೊಗ್ಗ:  ಶಿವಮೊಗ್ಗದಲ್ಲಿ  ಡಿಸಿಸಿ ಬ್ಯಾಂಕ್ ಅಧ್ಯಕ್ಷ  ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ ಮಂಜುನಾಥಗೌಡರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ED) ಅಧಿಕಾರಿಗಳು   ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಇಂದುಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.

ಆರ್ ಎಂ ಮಂಜುನಾಥ್ ಗೌಡ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಆಪ್ತ ಎಂದು ಹೇಳಲಾಗುತ್ತಿದೆ.  ಆರ್ ಎಂ ಮಂಜುನಾಥ್ ಗೌಡ ಸಂಬಂಧಿ ಉಷಾ ಅವರ ನಿವಾಸದಲ್ಲೂ ಇಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

Related posts

ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಕೇಸರಿ ಧ್ವಜ, ಬಂಟಿಂಗ್ಸ್ ಹಾಕಲು ನಿರ್ಬಂಧ ವಿಧಿಸಿಲ್ಲ- ಎಸ್ಪಿ ಮಿಥುನ್‍ ಕುಮಾರ್ ಸ್ಪಷ್ಟನೆ

ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗಲು ಸಿದ್ಧ-ಮುಖ್ಯಮಂತ್ರಿ ಹುದ್ದೆ ಆಸೆ ಬಿಚ್ಚಿಟ್ಟ ಸಚಿವ ಪ್ರಿಯಾಂಕ್ ಖರ್ಗೆ.

ಲಯನ್ಸ್ ಸಂಸ್ಥೆ ಸೇವೆ ಎಲ್ಲರಿಗೂ ಸಲ್ಲಬೇಕು-ಲಯನ್ಸ್  ಜಿಲ್ಲಾ ಗವರ್ನರ್ ನೆರಿ ಕರ್ನಲ್ಲಿಯೋ