ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ.

ಬೆಂಗಳೂರು: ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆಹಾರ ಖಾತೆ ಸಚಿವ ಕೆ.ಹೆಚ್​.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ಹೆಚ್​.ಮುನಿಯಪ್ಪ, ಸಚಿವ ಸ್ಥಾನ ಬಿಟ್ಟುಕೊಟ್ಟರೂ ಕೂಡ ನಾನು ಶಾಸಕನಾಗಿಯೇ ಇರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಹೈಕಮಾಂಡ್​​ ತೀರ್ಮಾನ ಮಾಡಿದರೆ ನೋಡೋಣ. ಯುವಕರಿಗೆ ಅವಕಾಶ ಸಿಗಲಿ ಎಂಬುದು ವೈಯಕ್ತಿಕ ಅಭಿಪ್ರಾಯ  ಎಂದರು.

ಆಹಾರ ಇಲಾಖೆಗೆ ಅನುದಾನದ ಕೊರತೆ ಇಲ್ಲ

ಇನ್ನು ಆಹಾರ ಇಲಾಖೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಬಜೆಟ್​ ನಲ್ಲಿ ಇಲಾಖೆಗೆ 10 ಸಾವಿರ ಕೋಟಿ‌ ಹಣ ಕೊಟ್ಟಿದ್ದಾರೆ. ಅಕ್ಕಿ‌ ನೀಡುವ ಭರವಸೆ ಕೊಟ್ಟು ನಾವು ಅಧಿಕಾರಕ್ಕೆ ಬಂದಿದ್ದೇವೆ. ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ಅನುಭವ ಇದೆ  ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Related posts

ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸಹಾಯಧನ ಭಾರಿ ಹೆಚ್ಚಳ

ಕಾಂಗ್ರೆಸ್ ಸರ್ಕಾರ ಬೀಳಿಸೋಕೆ ಅಲ್ಲಿಕೆ ಹೋಗಿದ್ದೀರಾ..? ಮಾಜಿ ಸಿಎಂ ಹೆಚ್ ಡಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು.

ಕಾಗೋಡು ತಿಮ್ಮಪ್ಪನವರಿಗೆ ದೇವರಾಜ ಅರಸು ಪ್ರಶಸ್ತಿ: ಸಿಹಿ ಹಂಚಿ ಸಂಭ್ರಮ.