ಕನ್ನಡಿಗರ ಪ್ರಜಾನುಡಿ
ಅಂಕಣಕೊಡಗುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಗಿರಿಜನರಿಗೆ ಅರಣ್ಯ ಹಕ್ಕುಪತ್ರ

ಮೈಸೂರು: “ಅರಣ್ಯ ಹಕ್ಕು ಕಾಯ್ದೆಯನ್ನು ಅಂದಿನ ಪ್ರಧಾನಿ ಮನಮೋಹನಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅರಣ್ಯದಲ್ಲಿ 70 ವರ್ಷಗಳಿಂದ ವಾಸಿಸುವ ಗಿರಿಜನರ ಹೆಸರಿಗೆ ಖಾತೆ ಮಾಡಿಕೊಡಲು ಜಾರಿಗೆ ತಂದರು. ಭೂ ಮಾಲೀಕರಾಗುವುದು ಒಂದು ಬಗೆಯ ಸಾಮಾಜಿಕ ಸಮಾನತೆಯ ಸಂಕೇತವಾಗಿದೆ. ನಿಮ್ಮ ಭೂಮಿಯಲ್ಲಿ ಅಗತ್ಯವಿರುವ ಆಹಾರ ಧಾನ್ಯಗಳನ್ನು ಬೆಳೆಯಬೇಕು‌. ಪೌಷ್ಠಿಕ ಆಹಾರ ಸೇವನೆ ಮಾಡುವ ಮೂಲಕ ನೀವು ಮತ್ತು ನಿಮ್ಮ ಮಕ್ಕಳು ಹೆಚ್ಚು ಆರೋಗ್ಯವಂತರಾಗಬೇಕು” ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಗಿರಿಜನರಿಗೆ ಕಿವಿಮಾತು ಹೇಳಿದರು.

ತಾಲೂಕು ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಿ.ಪಿ ಕುಪ್ಪೆ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ನಿಮ್ಮ ಕೃಷಿ ಭೂಮಿಯಲ್ಲಿ ನೀವೇ ವ್ಯವಸಾಯ ಮಾಡಬೇಕು. ಬೇರೆಯವರು ಬಂದು ನಿಮ್ಮ ಭೂಮಿ ಕೇಳಿದರೆ ಮಾರಾಟ ಮಾಡಬಾರದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಗಿರಿಜನರಿಗೆ ಕಿವಿಮಾತು ಹೇಳಿದರು.

ನಂತರ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, “ಈ ಭಾಗದಲ್ಲಿ ಶೈಕ್ಷಣಿಕ ಸೌಲಭ್ಯ ಅಗತ್ಯವಿದೆ. ಒಂದರಿಂದ ಪಿಯುಸಿವರಗೆ ತರಗತಿಗಳನ್ನು ತೆರೆದು ಇಲ್ಲಿನ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ನೆರವು ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಮೂಲಕ ಜನರಿಗೆ ದಿನನಿತ್ಯ ಕೆಲಸ ನೀಡಬೇಕು. ಸಣ್ಣ ಕೈಗಾರಿಕೆಯನ್ನು ಆರಂಭಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿ ಆರ್ಥಿಕ ಸಬಲರನ್ನಾಗಿಸಲು ಸರ್ಕಾರ ಗಮನಹರಿಸಬೇಕು” ಎಂದು ಹೇಳಿದರು.

ಇದಕ್ಕೂ ಮುನ್ನ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ತಾಲೂಕಿನ ಭೋಗಾಪುರ, ಹುಲ್ಮೆಟ್ಲು, ಗುಂಡ್ರೆ, ಮಚ್ಚೂರು ಗ್ರಾಮದಲ್ಲಿನ ಬುಡಕಟ್ಟು ಸಮುದಾಯದ 249 ಕುಟುಂಬಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್, ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ಪಂಚಾಯತ್ ಇಒ ಧರಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಬಹುತೇಕರು ಇದ್ದರು.ಳಿಗೆ 2006ರ ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ಬಿಜೆಪಿಯ ಯಾವುದೇ ಮುಖಂಡರು ಕಾಂಗ್ರೆಸ್‍ಗೆ ಹೋಗುವುದಿಲ್ಲ- ಕೆ.ಎಸ್ ಈಶ್ವರಪ್ಪ.

ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ವೈಭವದ ಚಾಲನೆ.

ಜನಪದದ ಮೂಲ ಸ್ವರೂಪವನ್ನು ಅರ್ಥೈಸಿಕೊಳ್ಳಿ : ಡಿ.ಮಂಜುನಾಥ