ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಕಾವೇರಿ ನೀರು ವಿವಾದ:  ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ- ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ.

ಬೆಂಗಳೂರು: ತಮಿಳುನಾಡಿಗೆ ಮತ್ತೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹಿನ್ನಲೆ, ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 5ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ.  ಸರಿಯಾಗಿ ಮಳೆಯಾಗದೇ ಈಗಾಗಲೇ ಜಲಾಶಯಗಳು ಖಾಲಿ ಖಾಲಿಯಿವೆ. ಬೆಂಗಳೂರಿಗರಿಗೆ ಕುಡಿಯುವ ನೀರಿಗೆ ಸಮಸ್ಯೆ  ಇದೆ. ನೀರು ಬಿಡುವ ಸ್ಥಿತಿ  ಇಲ್ಲ ಅಂತಾ  ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮನದಟ್ಟು ಮಾಡಲಿ ಎಂದು ಆಗ್ರಹಿಸಿದರು.

Related posts

ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಮಾರಾಟಗಾರರಿಗೆ ಶಾಕ್: ಈ ನಿಯಮ ನಿಬಂದನೆ ಪಾಲನೆ ಕಡ್ಡಾಯ..

ತುಂಗಾ ಉಳಿಸಿ ಜಾಗೃತಿ : ಛಾಯಾಚಿತ್ರ ಪ್ರದರ್ಶನ ಮತ್ತು ನದಿ ಉಳಿಸೋಣ ಕಾರ್ಯಕ್ರಮ.

ಆಟೋಗಳಲ್ಲಿ ಮೀಟರ್ ಅಳವಡಿಸದಿದ್ದರೆ ಸೂಕ್ತ ಕ್ರಮ- ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ ಕುಮಾರ್.