ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಬೆಳಗಾವಿಯ ದೊಡ್ಡ ಸೌಧದಲ್ಲಿ ಅಧಿವೇಶನ ನಡೆಯಲಿಲ್ಲ ಎಂದರೆ ಏನು ಪ್ರಯೋಜನ- ಮಾಜಿ ಸಿಎಂ ಬಿಎಸ್ ವೈ.

ಶಿವಮೊಗ್ಗ: ಕೋಟ್ಯಂತರ ರೂ.ಖರ್ಚು ಮಾಡಿ ಬೆಳಗಾವಿಯಲ್ಲಿ ದೊಡ್ಡ ಸೌಧ ನಿರ್ಮಾಣ ಮಾಡಿದ್ದೇವೆ ಅಲ್ಲಿ ಅಧಿವೇಶನ ನಡೆಯಲಿಲ್ಲ ಎಂದರೆ ಏನು ಪ್ರಯೋಜನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ವಿಚಾರಕ್ಕೆ ಸಬಂಧಿಸಿದಂತೆ ಮಾತನಾಡಿ, ಬೆಳಗಾವಿಯಲ್ಲಿ ದೊಡ್ಡ ಸೌಧ ಕಟ್ಟಿದರೂ ಅಧಿವೇಶನ ನಡೆಯಲಿಲ್ಲ ಎಂದರೆ ಏನೂ ಪ್ರಯೋಜನವಾಗುವುದಿಲ್ಲ. ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಅದು ಸರ್ಕಾರಕ್ಕೆ ಬಿಟ್ಟ ವಿಷಯ ಎಂದರು.
ರಾಜ್ಯ ಪ್ರವಾಸ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ರಾಜ್ಯ ಪ್ರವಾಸ ಆರಂಭಿಸಬೇಕಿತ್ತು. ಹಬ್ಬ ಮುಗಿಯಲಿ. ನಂತರ ಎಲ್ಲರೂ ಒಟ್ಟಾಗಿ ಪ್ರವಾಸ ಮಾಡುತ್ತೇವೆ ಎಂದ ಅವರು, ವಿದ್ಯುತ್ ಸಮಸ್ಯೆ ಉಂಟಾಗಿದೆ. ಸರ್ಕಾರ ಅದನ್ನು ಶೀಘ್ರವೇ ಬಗೆಹರಿಸಬೇಕು ಎಂದರು.

Related posts

50 ಕೋಟಿ ರೂ. ಅಮಿಷವೊಡ್ಡಿ ಸೆಳೆಯಲು ಬಿಜೆಪಿ ಪ್ರಯತ್ನ: ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ-‘ಕೈ’ ಶಾಸಕ ಗಂಭೀರ ಆರೋಪ

ಬೆಂಗಳೂರಿನ ಇಸ್ರೋ ಕಚೇರಿಗೆ  ಪ್ರಧಾನಿ ಮೋದಿ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ.

ಆ.13ರಂದು ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮ.