ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡರ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಮಗಳೂರು:ಮಾಜಿ ಸಚಿವ ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಯೋ ಸಹಜ ಖಾಯಿಲೆಯಿಂದ ನಿಧನರಾದ ದಿವಗಂತ ಡಿ.ಬಿ. ಚಂದ್ರೇಗೌಡರ ದಾರದಹಳ್ಳಿಯ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಪುಷ್ಪ ಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

          ಡಿ.ಬಿ. ಚಂದ್ರೇಗೌಡರು ಈ ನಾಡು, ಈ ದೇಶ ಕಂಡ ಅಪರೂಪದ ಅತ್ಯುತ್ತಮ ರಾಜಕಾರಣಿ. ನುರಿತ ಸಂಸದೀಯ ಪಟುವಾಗಿದ್ದರು. ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಈ ನಾಲ್ಕೂ  ವೇದಿಕೆಗಳಲ್ಲೂ ಅವರು ಸದಸ್ಯರಾಗಿದ್ದರು ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸುವುದು ಕಷ್ಟಕರವಾಗಿದ್ದ ಸಂದರ್ಭದಲ್ಲೂ ಅವರು ಅತ್ಯಂತ ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಿದ್ದರು ಎಂದರು.

          ಈ ವೇಳೆ ಡಿ.ಬಿ. ಚಂದ್ರೇಗೌಡರ ರಾಜಕೀಯ ಹಾದಿಯನ್ನು ಹಾಗೂ ಚಂದ್ರೇಗೌಡರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾರ್ಥಿಸುವುದಾಗಿ ತಿಳಿಸಿದರು.

Related posts

ಸರ್ಕಾರಿ ಜಾಗಗಳಲ್ಲಿ ಅಂಗನವಾಡಿಗಳನ್ನು ನಿರ್ಮಿಸಬೇಕು:ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮನವಿ

ರಾಜ್ಯ ಸಾರಿಗೆ ನೌಕರಿಗೆ ಭರ್ಜರಿ ಗುಡ್ ನ್ಯೂಸ್..

ಕನ್ನಡ ಭಾಷೆ, ಸಂಸ್ಕೃತಿ ನಾಡು ನುಡಿ ಗಡಿ ರಕ್ಷಣೆಗೆ ಶ್ರಮಿಸಬೇಕು-ಪತ್ರಕರ್ತ ವಿ.ಟಿ. ಅರುಣ್