ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ,

ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ ಮಾಡಲು ಮುಂದಾಗಿದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಭೂರಹಿತ ಸಾಗುವಳಿದಾರರ ಜಮೀನು ಸಕ್ರಮೀಕರಣಗೊಳಿಸುವಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವುದು ಕಂಡು ಬಂದ ಹಿನ್ನಲೆಯಲ್ಲಿ, ಎಲ್ಲಾ ತಾಲೂಕುಗಳಲ್ಲೂ ಶೀಘ್ರದಲ್ಲೇ ಬಗರ್ ಹುಕುಂ ಸಮಿತಿಗಳನ್ನು ರಚಿಸಿ, ಮುಂದಿನ 8 ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಲಾಗುವುದು. ಬಗರ್ ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಈವರೆಗೆ 9.29 ಲಕ್ಷ ಅರ್ಜಿ ಸಲ್ಲಿಸಿದ್ದಾರೆ. ಸಕ್ರಮೀಕರಣಗೊಳಿಸಲು ಪರಿಶೀಲನೆ ನಡೆಸಿದಾಗ ಹಲವು ಅಕ್ರಮಗಳು ಬಯಲಾಗಿವೆ ಎಂದರು.

ಒಬ್ಬನೇ 25 ಅರ್ಜಿಗಳನ್ನು ಹಾಕಿರುವುದು, ಸಾಗುವಳಿ ಮಾಡದಿರುವವರು ಅರ್ಜಿ ಹಾಕಿರುವುದು ಸೇರಿದಂತೆ ವ್ಯವಸ್ಥೆಯಲ್ಲಿ ಹಲವು ನ್ಯೂನ್ಯತೆಗಳಿದ್ದಾವೆ. ಅವುಗಳನ್ನು ಸರಿ ಪಡಿಸಲು ಹೊಸದಾಗಿ ಬಗರ್ ಹುಕುಂ ಸಮಿತಿಗಳನ್ನು ರಚನೆ ಮಾಡಲಾಗುವುದು. ಈಗಾಗಲೇ 50 ಪ್ರಸ್ತಾವನೆಗಳು ಬಂದಿದ್ದು, ಅಷ್ಟೂ ಸಮಿತಿಗಳ್ನು ರಚಿಸಲಾಗುವುದು. ಅರ್ಹರನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಹಶೀಲ್ದಾರ್ ಅವರು ಜಮೀನು ಮಹಜರ್ ಮಾಡಿ ಸಾಗುವಳಿ ಖಾತ್ರಿಪಡಿಸಲಿದ್ದಾರೆ.

ಇನ್ಮುಂದೆ ಬಗರ್ ಹುಕುಂ ಸಮಿತಿ ಸಭೆಗಳನ್ನು ಗಣಕೀಕೃತಗೊಳಿಸಲಾಗುತ್ತದೆ. ಹಾಜರಾತಿ ಬಯೋಮೆಟ್ರಿಕ್ ಮೂಲಕ ಖಾತ್ರಿ ಪಡಿಸಿಕೊಳ್ಳಲಾಗುತ್ತದೆ. ಅಕ್ರಮಗಳನ್ನು ತಡೆಯಲು ಈ ಕ್ರಮ ಅನುಸರಿಸಿಸಲಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಈ ಮೂಲಕ ಬಗರ್ ಹುಕುಂ ಜಮೀನು ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ನೀಡಿದರು.

 

Related posts

ಲಕ್ಷಾಂತರ ಹೋರಾಟಗಾರರ ಶ್ರಮದಿಂದ ದೇಶ ಸ್ವತಂತ್ರ- ಜ್ಯೋತಿಕುಮಾರಿ ಕೆ.ವಿ. 

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ಎಫೆಕ್ಟ್: ಕಚ್ಚಾ ತೈಲ ಬೆಲೆ ಏರಿಕೆ.

ಆಭರಣಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ…