ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನ. 14ರಂದು ಗುರುಪುರದ ಬಿಜಿಎಸ್ ಗೋಶಾಲೆಯಲ್ಲಿ ಗೋಪೂಜೆ

ಶಿವಮೊಗ್ಗ:  ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಾದ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿರುವ ಪುರಾತನ ಕಾಲದ ಶ್ರೀ ವೀರ ಸೋಮೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಮ್ಮಿಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸಾರ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನ. 14ರಂದು ಮಂಗಳವಾರ ಬೆಳಿಗ್ಗೆ 10.30 ಕ್ಕೆ ಗೋ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ವೀರಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ದೇವಸ್ಥಾನದ ಆವರಣದಲ್ಲಿ ಬಾಳೆಕಂದು,ಮಾವಿನ ತೋರಣಗಳಿಂದ ಅಲಂಕರಿಸಿ, ಗೋಶಾಲೆಯ ಎಲ್ಲಾ ಗೋವುಗಳನ್ನು ದೇವಸ್ಥಾನದ ಆವರಣಕ್ಕೆ ಕರೆತಂದು ಗೋವುಗಳನ್ನು ವಿವಿಧ ರೀತಿಯಲ್ಲಿ ಅಲಂಕಾರ ಮಾಡಿ ಅಂದು  ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಂದ ಗೋವುಗಳ ಪೂಜೆಯನ್ನು ಮಾಡಿ ವಿವಿಧ ದವಸ – ಧಾನ್ಯಗಳನ್ನು ವಿತರಿಸಲಾಗುತ್ತದೆ.
ಅಂದು ದೇವಸ್ಥಾನದಲ್ಲಿ ವಿಶೇಷವಾದ ಅಲಂಕಾರ, ಪಂಚಾಮೃತ ಅಭಿಷೇಕ,ಪೂಜಾ ವಿಧಿ ವಿಧಾನಗಳನ್ನು ಮಾಡಲಾಗುತ್ತದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವೀರಸೋಮೇಶ್ವರ ಕೃಪೆಗೆ ಪಾತ್ರರಾಗಬೇಕಾಗಿ ಶಿವಮೊಗ್ಗ ಶಾಖಾ ಮಠವು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ

Related posts

ಶಾಲೆಗಳಲ್ಲಿ ಮೊಟ್ಟೆ, ಬಾಳೇಹಣ್ಣು ವಿತರಣೆ ಯೋಜನೆಗೆ ಚಾಲನೆ: ಮಕ್ಕಳ ಜೊತೆಯೇ ಕುಳಿತು ಊಟ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು-ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ

ರಾಷ್ಟ್ರಮಟ್ಟದ ವಿಜ್ಞಾನ ವಿಚಾರಸಂಕಿರಣದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ಗೋವರ್ಧನ ಗೌಡರಿಗೆ ದ್ವಿತೀಯ ಸ್ಥಾನ