ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪರಿಷತ್ ಗೆ ಮೂವರ ನಾಮನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ.

 

ಬೆಂಗಳೂರು:  ವಿಧಾನಪರಿಷತ್ ಸ್ಥಾನಕ್ಕೆ ಮೂವರ ನಾಮ ನಿರ್ದೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ವಿಧಾನಪರಿಷತ್ ಸ್ಥಾನಕ್ಕೆ  ಹಿರಿಯ ನಟಿ ಮಾಜಿ ಸಚಿವೆ ಉಮಾಶ್ರೀ, ಕಾಂಗ್ರೆಸ್ ಮುಖಂಡ ಎಂ.ಆರ್ ಸೀತಾರಾಂ ಹಾಗೂ ಸುಧಾಮ್ ದಾಸ್ ಅವರನ್ನ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೂವರ ನಾಮನಿರ್ದೇಶನಕ್ಕೆ ಅನುಮೋದನೆ ನೀಡಿದ್ದಾರೆ.

ಈ ಮಧ್ಯೆ ಸುಧಾಮ್ ದಾಸ್ ಅವರನ್ನ ಪರಿಷತ್ ಗೆ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಆರ್.ಬಿ ತಿಮ್ಮಾಪುರ್, ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ನಾಲ್ವರು ಸಚಿವರ ಪತ್ರಕ್ಕೆ ಹೈಕಮಾಂಡ್ ಮನ್ನಣೆ ನೀಡಿಲ್ಲ ಎನ್ನಲಾಗಿದೆ.

Related posts

ಕೈಕೊಟ್ಟ ಮುಂಗಾರು ಮಳೆ: ಜನಸಾಮನ್ಯರಿಗೆ ಇನ್ನಷ್ಟು ತಟ್ಟಲಿದೆ ಬೆಲೆ ಏರಿಕೆ ಬಿಸಿ.

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್.

ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಆಗಸ್ಟ್ 29ಕ್ಕೆ