ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಳೆದ 6 ತಿಂಗಳಲ್ಲಿ ಅಪಘಾತಕ್ಕೆ 5830 ಮಂದಿ ಬಲಿ: ಬೈಕ್ ಸವಾರರೇ ಹೆಚ್ಚು..

ಬೆಂಗಳೂರು:  ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ವಾಹನಗಳು ರಸ್ತೆಗಿಳಿಯುತ್ತಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಕಳೆದ 6 ತಿಂಗಳಲ್ಲಿ ಅಪಘಾತದಿಂದ  5830 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಬೈಕ್ ಸವಾರರೇ ಹೆಚ್ಚು..

ಹೌದು ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು,  ಚಾಲಕರ ಅಜಾಗರೂಕತೆ, ಹಾಳಾದ ರಸ್ತೆಯಿಂದ ಅಪಘಾತಗಳು ಸಂಭವಿಸುತ್ತಿವೆ. 2023ರ ಮೊದಲಾರ್ಧದಲ್ಲಿ 5830 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ಅಪಘಾತದಿಂದ ಅತ್ಯಧಿಕ ಸಾವು ನೋವು ಸಂಭವಿಸಿದೆ. ಅಪಘಾತದಿಂದ ಬರೋಬ್ಬರಿ 1094 ಜನ ಮೃತಪಟ್ಟಿದ್ದಾರೆ. ಜೂನ್ನಲ್ಲಿ 965, ಜುಲೈನಲ್ಲಿ 807, ಆಗಸ್ಟ್ನಲ್ಲಿ 795 ಜನ ಸಾವನ್ನಪ್ಪಿದ್ದಾರೆ. ಅಪಘಾತದ ಸಾವಿಗೀಡಾದ ಹೆಚ್ಚಿನ ಜನರು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯವರಾಗಿದ್ದಾರೆ.

ಹೆಚ್ಚು ಬೈಕ್ ಸವಾರರೇ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುತ್ತಿದ್ದಾರೆ. ಅಂಕಿಅಂಶಗಳ ಪ್ರಕಾರ, ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇಕಡಾ 60 ರಷ್ಟು ಜನ ಬೈಕ್ ಸವಾರರು ಎಂಬುವುದು ಆಘಾತಕಾರಿ ಅಂಶವಾಗಿದೆ. ಮೂರನೇ ಎರಡರಷ್ಟು ಬೈಕ್ ಸವಾರರು ರಸ್ತೆಯಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದ್ದರಿಂದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನ ಬಳಕೆದಾರರಿಗೆ ಸಂಬಂಧಿಸಿದ ಸುರಕ್ಷತೆಯ ಬಗ್ಗೆ ಅತಿಯಾಗಿ ಹೇಳಲಾಗುವುದಿಲ್ಲ. ಸಾವನ್ನಪ್ಪಿದ ಶೇ 60 ರಷ್ಟು ಬೈಕ್ ಸವಾರರಲ್ಲಿ 2/3 ಜನರು ಮಾತ್ರ ಹೆಲ್ಮೆಟ್ ಧರಿಸಿದ್ದರು. ಹೆಲ್ಮೆಟ್ ಧರಿಸಿ ಪ್ರಯಾಣ ಮಾಡುವುದರಿಂದ ಅಪಘಾತ ಸಮಯದಲ್ಲಿ ಸಾವಿನಿಂದ ದೂರವಾಗಬಹುದು. ಇನ್ನು 50 ರಿಂದ 52 ರಷ್ಟು ಬೈಕ್ ಸವಾರರು ಬೆಂಗಳೂರಲ್ಲಿ ಸಂಭವಿಸಿದ ಅಪಘಾದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ ತಿಂಗಳಲ್ಲಿ 29, ಜೂನ್ನಲ್ಲಿ 28, ಜುಲೈನಲ್ಲಿ 8 ಮತ್ತು ಆಗಸ್ಟ್ನಲ್ಲಿ 6 ಜನ ಅಪಘಾತದಿಂದ ಸಾವನ್ನಪ್ಪಿದ್ದಾರೆ.

 

Related posts

 ನ.27 ರಂದು ಶಿರಾಳಕೊಪ್ಪ ಬಸವೇಶ್ವರ ಸಹಕಾರ ಬ್ಯಾಂಕ್ ನ 111ನೇ ವಾರ್ಷಿಕೋತ್ಸವ

ಪತ್ರಕರ್ತ, ಸಾಹಿತಿ ಶಿ.ಜು.ಪಾಶ ಅವರಿಗೆ ಡಾ.ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ.

ಜಿಲ್ಲೆಯ ಎಲ್ಲಾ ಗ್ರಾ.ಪಂ ಪಿಡಿಒಗಳು ತಮ್ಮ ಕಾರ್ಯನಿರ್ವಹಣೆ ಸ್ಥಳದಲ್ಲಿಯೇ ವಾಸಿಸಬೇಕು-ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಆಗ್ರಹ