ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇಸ್ರೋದ ಗಗನಯಾನ ನೌಕೆ ಸುರಕ್ಷತಾ ಪ್ರಯೋಗ ಯಶಸ್ವಿ.

ಹೈದರಾಬಾದ್:  ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ, ಗಗನಯಾನ ಯೋಜನೆಯ  ಪರೀಕ್ಷಾ ಹಾರಾಟವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಇಸ್ರೋದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಯಶಸ್ವಿಯಾಗಿದೆ.  ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ರಾಕೆಟ್​ ನಭಕ್ಕೆ ಹಾರಿತ್ತು. ರಾಕೆಟ್​​ನಿಂದ ಬೇರ್ಪಟ್ಟು ಎರಡೂ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಭೂಮಿಗೆ ಬಂದಿಳಿದಿವೆ.

ಇಸ್ರೋ ಮುಖ್ಯಸ್ಥ ಸೋಮನಾಥ್ ಅವರು  ಈ ಕುರಿತು ಮಾಹಿತಿ ನೀಡಿದ್ದು, ಟೆಸ್ಟ್ ವೆಹಿಕಲ್ ಲಿಫ್ಟ್ ಆಫ್ ಇಂದು ಯಶಸ್ವಿಯಾಗಿದ್ದು, ವಾಹನ ಸುರಕ್ಷಿತವಾಗಿದೆ.   ನಿರೀಕ್ಷಿತ ಉಡಾವಣೆಯಾಗಿದೆ ಎಂದು ತಿಳಿಸಿದ್ದಾರೆ.

ಗಗನಯಾನ ಮಿಷನ್ನ ಪ್ರಾಥಮಿಕ ಗುರಿ ಮಾನವರನ್ನು ಬಾಹ್ಯಾಕಾಶಕ್ಕೆ ಉಡಾಯಿಸುವುದು, ಮೂರು ದಿನಗಳ ಕಾರ್ಯಾಚರಣೆಗಾಗಿ ಅವರನ್ನು 400 ಕಿಲೋಮೀಟರ್ ಎತ್ತರದಲ್ಲಿ ಭೂಮಿಯ ಕೆಳ ಕಕ್ಷೆಯಲ್ಲಿ ಇರಿಸುವುದು, 2025 ರಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳುವುದು.

ಗಗನಯಾನ ಮಿಷನ್ನ ಸಿಬ್ಬಂದಿಯನ್ನು ಎಲ್ ವಿಎಂ 3 ರಾಕೆಟ್ ಬಳಸಿ ಗೊತ್ತುಪಡಿಸಿದ ಕಕ್ಷೆಗೆ ಸಾಗಿಸಲಾಗುವುದು. ಈ ರಾಕೆಟ್ ಘನ, ದ್ರವ ಮತ್ತು ಕ್ರಯೋಜೆನಿಕ್ ಪ್ರೊಪಲ್ಷನ್ ವ್ಯವಸ್ಥೆಗಳು ಸೇರಿದಂತೆ ವಿವಿಧ ಹಂತಗಳನ್ನು ಒಳಗೊಂಡಿದೆ.

Related posts

ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಉತ್ತರ ಕನ್ನಡ ಜಿಲ್ಲೆಗೆ ಎಂ ಪ್ರವೀಣ್ ಕುಮಾರ್,- ಚಿತ್ರದುರ್ಗಕ್ಕೆ ಆರ್ ಕಿರಣ್ ನೇಮಕ

ರೋಗಿಗಳ ಆರೈಕೆ ಮಾಡುತ್ತಿರುವ ಶರಣ್ಯ ಕಾರ್ಯ ಶ್ಲಾಘನೀಯ-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ 

ಜಿಲ್ಲಾ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ.