ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿ: ಸ್ನಾತಕೋತ್ತರ ಪದವಿಯ ಮೆರಿಟ್ ಸೀಟುಗಳು ಭರ್ತಿ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‍ನಲ್ಲಿಎಲ್ಲ 33 ವಿಭಾಗಗಳಿಗೂ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡಿದ್ದು, ಬಹುತೇಕಎಲ್ಲ ಕೋರ್ಸ್‍ಗಳ ಮೆರಿಟ್ ಸೀಟುಗಳು ಭರ್ತಿಯಾಗಿವೆ.
ವಿಶ್ವವಿದ್ಯಾಲಯದ ಮುಖ್ಯಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ನವೆಂಬರ್ 27, 28 ಮತ್ತು 29ರಂದು ಪ್ರವೇಶಾತಿಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಮೊದಲ ದಿನವಾದ ಸೋಮವಾರದಂದು ಮೆರಿಟ್ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆಯಾವುದೇ ತೊಡಕುಗಳಿಲ್ಲದೆ ನಡೆಯಿತು. 28 ಹಾಗೂ 29ರಂದು ಪೇಮೆಂಟ್ ಮತ್ತುಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಾರ ಸೋಮವಾರ ಸಂಜೆ4 ಗಂಟೆಯ ಹೊತ್ತಿಗೆಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ.85 ಕ್ಕಿಂತ ಹೆಚ್ಚು ಸೀಟುಗಳು ಭರ್ತಿಯಾಗಿದ್ದವು.
ಕಳೆದ ಬಾರಿಯಂತೆ ವಾಣಿಜ್ಯಅಧ್ಯಯನ ಮತ್ತುರಸಾಯನಶಾಸ್ತ್ರ ವಿಭಾಗಗಳ ಪ್ರವೇಶಾತಿಗಾಗಿಅತಿಹೆಚ್ಚು ಅಭ್ಯರ್ಥಿಗಳು ಆಗಮಿಸಿದ್ದು, ಕೌನ್ಸೆಲಿಂಗ್‍ಕೇಂದ್ರದ ಮುಂದೆ ಭಾರೀ ವಿದ್ಯಾರ್ಥಿಗಳು ಮತ್ತು ಪೋಷಕರಜನಸ್ತೋಮವಿತ್ತು. ಈ ವರ್ಷಎರಡನೇ ಬಾರಿಗೆರಾಜ್ಯಸರ್ಕಾರದಕೇಂದ್ರಿಕೃತ ಶೈಕ್ಷಣಿಕ ಪೋರ್ಟಲ್ ಯು.ಯು.ಸಿ.ಎಂ.ಎಸ್. ಮೂಲಕ ಪ್ರವೇಶಾತಿಅರ್ಜಿ ಹಾಕಲು ಅವಕಾಶ ನೀಡಲಾಗಿದ್ದರೂ ಅಭ್ಯರ್ಥಿಗಳ ಪ್ರತಿಕ್ರಿಯೆಉತ್ತಮವಾಗಿದ್ದು, ಪ್ರವೇಶಾತಿ ಪ್ರಕ್ರಿಯೆ ಭರ್ಜರಿಯಾಗಿಯೇ ನಡೆಯಿತು.
ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಸುಲಭ ಮಾದರಿಗಳಲ್ಲಿ ಅವಕಾಶಗಳನ್ನು ನೀಡಲಾಗಿತ್ತು. ಆಫ್‍ಲೈನ್‍ನಲ್ಲಿ ಶುಲ್ಕ ಭರಿಸುವವರ ಸಂಖ್ಯೆ ಹೆಚ್ಚಾದಂತೆ ಬ್ಯಾಂಕಿನಲ್ಲಿ ಹೆಚ್ಚುವರಿಯಾಗಿ ಮೂರು ಕೌಂಟರ್‍ಗಳನ್ನು ತೆರೆಯಲಾಗಿತ್ತು. ಜೊತೆಗೆ ಭಸವ ಸಭಾಭವನ ಹಾಗೂ ಜೀವವಿಜ್ಞಾನ ಸಮುಚ್ಛಯದಲ್ಲಿ ಕೌಂಟರ್‍ಗಳನ್ನು ತೆರೆದು ಶುಲ್ಕ ಭರಿಸುವ ಪ್ರಕ್ರಿಯೆಯನ್ನು ಸುಲಲಿತಗೊಳಿಸಲಾಯಿತು.
ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚು ಸೀಟು ಆಕಾಂಕ್ಷಿಗಳು ಮತ್ತುಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲ ವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜವಿಜ್ಞಾನ, ವಾಣಿಜ್ಯಶಾಸ್ತ್ರ ಮತ್ತು ಬಸವ ಭವನ, ಗಣಿತ ವಿಜ್ಞಾನ ಮತ್ತುಜೀವ ವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಎರಡು ದಿನವೂ ಇದೇ ಕಟ್ಟಡಗಳಲ್ಲಿ ಕೌನ್ಸೆಲಿಂಗ್ ನಡೆಯಲಿದೆ.
ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿವಿಯದ್ವಾರದ ಬಳಿಯೇ ವಿಭಾಗವಾರುಕೌನ್ಸೆಲಿಂಗ್‍ಕಟ್ಟಡದ ವಿವರ, ಮಾರ್ಗತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು. ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜುಆಯ್ಕೆಕುರಿತ ಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆ ದಾರಿಯಾಗದಂತೆ ಡಿಜಿಟಲ್‍ಬೋರ್ಡ್‍ಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು ಹಾಗೂ ಮೈಕ್ ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.

Related posts

ಸರ್ಕಾರಿ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿಗೆ ಮುಂದಾದ ಸರ್ಕಾರ.

ಉನ್ನತ ಶಿಕ್ಷಣದಲ್ಲಿ ಯುವಜನತೆ ಖಿನ್ನತೆಗೆ ಒಳಗಾಗುವ ಅಪಾಯ ಹೆಚ್ಚು

ಅತಿ ವೇಗದಲ್ಲಿ ಕರಗುತ್ತಿದೆ ಹಿಮ: ಎದುರಾಯ್ತು ಅಪಾಯದ ಆತಂಕ.