ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ: ಆದ್ರೆ ಕೇಂದ್ರದಿಂದ ಪರಿಹಾರ ಕೊಡಿಸಲಿ-ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರ ತಂಡದಿಂದ ಬರ ಅಧ್ಯಯನ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ  ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ ಬರ  ಅಧ್ಯಯನ ಮಾಡಲಿ ತಪ್ಪೇನಿಲ್ಲ. ಕೃಷಿ ಸಚಿವರು ಕಂದಾಯ ಸಚಿವರು ವರದಿ ಕೊಟ್ಟಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದೆ ನಮ್ಮ ಸಚಿವರ ವರದಿ ಆಧರಿಸಿ ಪರಿಹಾರ ಕೊಡಿಸಲಿ. ಕೇಂದ್ರದಿಂದ ಬಿಜೆಪಿಪಿಯವರೇ ದುಡ್ಡು ಕೊಡಿಸಲಿ. ಕೇಂದ್ರ ಕೂಡ ರಾಜ್ಯದ ನೆರವಿಗೆ ನಿಲ್ಲಬೇಕು ಎಂದು ಹೇಳಿದರು.

ನಾಳೆ ಕನ್ನಡ ರಾಜ್ಯೋತ್ಸವದ ದಿನ ಎಂಇಎಸ್ ನಿಂದ ಕರಾಳ ದಿನಾಚಾರಣೆಗೆ ನಿರ್ಧರಿಸಿರುವ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ರಾಜ್ಯದ ಹಿತ ಕಾಪಾಡುವುದು ನಮ್ಮ ಕರ್ತವ್ಯ. ಈ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ.  ನಿನ್ನೆಯೇ ಸಿಎಂ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ ಎಂದರು.

Related posts

ಅಹಿಂಸಾ ಮಾರ್ಗ, ಸರಳ ಜೀವನ ಶೈಲಿ ಆದರ್ಶವು ಅಗತ್ಯ-ಎಚ್.ಡಿ.ರಮೇಶ್ ಶಾಸ್ತ್ರೀ

ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

TOD News

ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ವಿನೋದ್ ಹುಟ್ಟುಹಬ್ಬ: ಅನಾಥರಿಗೆ ಲಘು ಉಪಾಹಾರ ಮತ್ತು ಹಣ್ಣು ವಿತರಣೆ