ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂಪುಟ ಪುನರ್ ರಚನೆ  ಬಗ್ಗೆ ಹೈಕಮಾಂಡ್ ತೀರ್ಮಾನ – ಸಚಿವ ದಿನೇಶ್ ಗುಂಡೂರಾವ್.

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಸಂಪುಟದಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕಾಗುತ್ತದೆ ಹೀಗಾಗಿ ಸಂಪುಟ ಪುನರ್ ರಚನೆ ಆಗುತ್ತಿರುತ್ತೆ ಸಂಪುಟದಲ್ಲಿ ಅವಕಾಶ ಸಿಗದೆ ಇರುವವರಿಗೆ ಅವಕಾಶ ಸಿಗಬಹುದ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಪೋಸ್ಟ್ರ್ ಮಾಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್,  ಬಿಜೆಪಿಯವರು ತಮ್ಮ ಸಂಸ್ಕೃತಿಯನ್ನ ಪ್ರದರ್ಶನ ಮಾಡುತ್ತಿದ್ದಾರೆ. ಇದು ಬಿಜೆಪಿ ನಾಯಕರ ಕೀಳು ಮನಸ್ಥಿತಿ ತೋರುತ್ತದೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ಹಾಗಾಗಿ ಹತಾಶೆ ಮನೋಭಾವದಿಂದ ಹಾಗೆ ಮಾಡುತ್ತಿದ್ದಾರೆ.  ಕೀಳುಮಟ್ಟದ ರಾಜಕಾರಣವನ್ನ ಬಿಜೆಪಿ ಪ್ರದರ್ಶಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

Related posts

ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಉತ್ತರ ಕನ್ನಡ ಜಿಲ್ಲೆಗೆ ಎಂ ಪ್ರವೀಣ್ ಕುಮಾರ್,- ಚಿತ್ರದುರ್ಗಕ್ಕೆ ಆರ್ ಕಿರಣ್ ನೇಮಕ

ಮಕ್ಕಳ ದಸರಾ: ಕ್ರೀಡೆ, ಕಲೆ, ಕೌಶಲ್ಯ ಸ್ಪರ್ಧೆ ,ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ ಯಶಸ್ವಿ.

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ: ಬಡವರು ದುಬಾರಿ ಮದುವೆ ಮಾಡಿಕೊಳ್ಳಬೇಡಿ – ಸಿಎಂ ಸಿದ್ದರಾಮಯ್ಯ ಕಿವಿಮಾತು