ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿ,ಸುವ್ಯವಸ್ಥೆ, ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೆ.18ರಿಂದ ಪ್ರಾರಂಭಗೊಂಡು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಗಣಪತಿಯ ಪೂಜಾನುಷ್ಠಾನ ನಡೆದಿದ್ದು, ನಿನ್ನೆ ಗಣಪತಿಯ ವಿಸರ್ಜನಾ ಕಾರ್ಯ ಸೌಹಾರ್ದಯುತವಾಗಿ ನಡೆದಿದ್ದು, ಅದಕ್ಕೆ ಕಾರಣರಾದ ಕಾರ್ಯಕ್ರಮದ ಆಯೋಜಕರು, ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಭಕ್ತವೃಂದ ಹಾಗೂ ಜಿಲ್ಲಾಡಳಿತಕ್ಕೆ ತಮ್ಮ ಅಭಿನಂದನೆ ತಿಳಿಸಿದ್ದಾರೆ.
ಹಾಗೆಯೇ ಜಿಲ್ಲೆಯ ಎಲ್ಲಾ ಕಾರ್ಯಕ್ರಮಗಳು ಹೀಗೆಯೇ ಶಾಂತಿಯುತವಾಗಿ ನಡೆದು ಎಲ್ಲಾ ವರ್ಗದ ಜನರಲ್ಲಿ ಸೌಹಾರ್ದತೆ ನೆಲೆಸಲಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ದಾರಿದೀಪವಾಗಲಿ ಎಂದು ಅವರು ಆಶಿಸಿದ್ದಾರೆ.

Related posts

 ಐಸಿಯುನಿಂದ ವಾರ್ಡ್ ​ಗೆ ಮಾಜಿ ಸಿಎಂ ಹೆಚ್.ಡಿಕೆ ಶಿಫ್ಟ್.

ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ.

ಚುನಾವಣಾ ಅಭ್ಯರ್ಥಿಗಳು ಕುಟುಂಬಸ್ಥರ ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ- ಹೈಕೋರ್ಟ್.