ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸರ್ಕಾರದಿಂದ ಗ್ಯಾರಂಟಿ ಜಾರಿ: ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ಬಂದಾಗ ಆಸೆ ಹಾಗೂ ಕಾರ್ಯಕ್ರಮದ ನಿರೀಕ್ಷೆ ಇರುತ್ತದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಶೀಘ್ರವಾಗಿ ಈಡೇರಿಸುತ್ತಿದ್ದೇವೆ. ನೀಡಿದ ಭರವಸೆ ಈಡೇರಿದಾಗ ಮಾತ್ರ ಜನರು ನಮ್ಮ ಮೇಲಿಟ್ಟಿರುವ ನಂಬಿಕೆಗೆ ಬೆಲೆ ಬರುತ್ತದೆ ಎಂದರು.
ರಾಜ್ಯ ಸರ್ಕಾರದ 5 ಗ್ಯಾರಂಟಿ ಪೈಕಿ ನನಗೆ ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮಿ ಯೋಜನೆ ಹೆಚ್ಚು ಹತ್ತಿರವಾಗಿದೆ. ಹಾಗೆಯೇ ಶಕ್ತಿ ಮತ್ತು ನಿರುದ್ಯೋಗ ಭತ್ಯೆ ಸಹ ಹೆಚ್ಚು ಅರ್ಥಪೂರ್ಣವಾಗಿದೆ ಎಂದರು.
ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಗಲಿದೆ. ಕೋರ್ಟ್ ವಿಚಾರ ಬಂದಾಗ ಅಧಿಕಾರಿಗಳು ನಿಭಾಯಿಸುತ್ತಾರೆ. ಈಗಾಗಲೇ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭವಾಗಿದ್ದು ಸಭೆ ನಡೆಸಲಾಗುತ್ತಿದೆ ಎಂದರು.
ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ಸಲ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಇದೇ 18ರಂದು ಮಂಡ್ಯದಲ್ಲಿ
ಚಾಲನೆ ನೀಡಲಾಗುತ್ತದೆ. ಇದರಿಂದ 60 ಲಕ್ಷ ಮಕ್ಕಳಿಗೆ ಅನುಕೂಲ ಆಗಲಿದೆ. ಹಾಗೆಯೇ ದೇಶದಲ್ಲಿ ಮೊದಲ ಬಾರಿಗೆ ಪಿಯು 2ನೇ ಸಲ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಅವರನ್ನು ಫೇಲ್ ಮಾಡಿದರೆ ಒಂದು ವರ್ಷ ಕಾಯಬೇಕು. ಹಾಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದರು.
ಪಠ್ಯ ಪುಸ್ತಕ ಬದಲಾಗಿದೆ. ಎನ್‍ಇಪಿ ಬದಲು ಎಸ್‍ಇಪಿ ಜಾರಿಗೊಳಿಸಲಾಗುತ್ತದೆ. ಪಠ್ಯ ಪುಸ್ತಕದಲ್ಲೂ ಕೆಲ ಬದಲಾವಣೆ ತರಬೇಕಿದೆ. ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದೆ. ಇದನ್ನು ಶಿಕ್ಷಕರ ದಿನಾಚರಣೆ ದಿನ ರೀಲಾಂಚ್ ಮಾಡಲಾಗುವುದು. ಈಗಾಗಲೇ 3.40 ಕೋಟಿ ಜನ ಇದಕ್ಕೆ ಸದಸ್ಯರಾಗಿದ್ದಾರೆ. ಮುಂದಿನ ದಿನಗಳಲ್ಲಿ ಡಿಜಿಟಲ್ ಲೈಬ್ರರಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಚ್ಚಿನ ಬೇಡಿಕೆಯಿದ್ದು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಆರಂಭಿಸಲಾಗುವುದು. ಅನುದಾನ ಪಡೆಯದ 1600 ಶಾಲೆಗಳಿವೆ ಕೆಲವೊಂದು ನಿಯಮಗಳನ್ನು ಸಡಿಲಗೊಳಿಸಲಾಗುತ್ತಿದೆ ಎಂದರು.
ಇನ್ನಾರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ. ಅವರಿಗೆ ಬಸ್ ನಿಲ್ದಾಣದಲ್ಲಿ ಗಿಣಿ ಶಾಸ್ತ್ರ ಹೇಳಲು ಹೇಳಿ. ಬಸ್ ಸ್ಟ್ಯಾಂಡ್‍ನಲ್ಲಿ ಜಾಗ ಖಾಲಿ ಇರುತ್ತೆ. ಅಲ್ಲಿ ಅವರಿಗೆ ಹೋಗಿ ಗಿಣಿಶಾಸ್ತ್ರ ಹೇಳಲಿ ಎಂದು ತಿರುಗೇಟು ನೀಡಿದರು.

ಸರ್ಕಾರದ ವಿರುದ್ಧ ಭ್ರಷ್ಟಾಚಾರ. ಆರೋಪ ಕೇಳಿ ಬರುತ್ತಿರುವ ಬಗ್ಗೆ ಸಾಕ್ಷ್ಯಾಧಾರ ನೀಡಲಿ. ಸುಮ್ಮನೆ ಆರೋಪ ಮಾಡುವುದು ಬೇಡ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಇದನ್ನೇ ಹೇಳಿದ್ದಾರೆ ಎಂದರು.
ಅಘೋಷಿತ ವಿದ್ಯುತ್ ಕಡಿತದ ಬಗ್ಗೆ ಸಾಕಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಲ ವಿದ್ಯುತ್ ಕೇಂದ್ರಗಳಲ್ಲಿ ನೀರಿನ ಕೊರತೆ ಇದೆ. ಹಾಗಾಗಿ ಕೆಲವೆಡೆ ವಿದ್ಯುತ್ ಕಡಿತವಾಗುತ್ತಿದೆ ಎಂದು ಹೇಳಿದರು.

Related posts

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ: ಕಿಡ್ನ್ಯಾಪ್ ಶಂಕೆ.

ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ: ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ