ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಿಧಾನಪರಿಷತ್ ನೈರುತ್ಯ ಕ್ಷೇತ್ರದ ಚುನಾವಣೆ: ಮತದಾರರ ನೋಂದಣಿ ಅಭಿಯಾನಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ.

ಶಿವಮೊಗ್ಗ: ಜೂನ್ 2024ರಲ್ಲಿ ನಡೆಯುವ ವಿಧಾನಪರಿಷತ್ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿ ಚಾಲನೆ ನೀಡಿದರು.
ತೀರ್ಥಹಳ್ಳಿಯ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಈ ಸಂದರ್ಭದಲ್ಲಿ ಈ ಕಾರ್ಯ ನೆರವೇರಿಸಿ, ಮತದಾನಕ್ಕೆ ಆರ್ಹರಿರುವ ಎಲ್ಲಾ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಮೂಲಕ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಶಿಕ್ಷಕರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ.ಆರ್.ಎಂ. ಮಂಜುನಾಥಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಶಂಕರಘಟ್ಟ ರಮೇಶ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಕೋಆರ್ಡಿನೇಟರ್ ಜಿ.ಡಿ.ಮಂಜುನಾಥ್, ಆರ್ಯ ಈಡಿಗರ ಸಂಘದ ಅಧ್ಯಕ್ಷ ರಾಮಚಂದ್ರ ಮಟ್ಟಿನಮನೆ, ಮುಖಂಡರುಗಳಾದ ಡಾ.ಸುಂದರೇಶ್, ರಾಘವೇಂದ್ರ ಶೆಟ್ಟಿ, ರತ್ನಾಕರ್ ಶೆಟ್ಟಿ, ಸುಕೇಶ್, ಮುಡುಬ ಮಂಜುನಾಥ್, ಅಸಾದಿ ಇನ್ನಿತರರು ಇದ್ದರು.

Related posts

ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ- ಮೇಯರ್ ಎಸ್.ಶಿವಕುಮಾರ್

ದೇಶದಲ್ಲೇ ಅತ್ಯಂತ ಶುದ್ಧಗಾಳಿ ಇರುವ ರಾಜ್ಯ ಕರ್ನಾಟಕ: ಪಟ್ಟಿಯಲ್ಲಿ ಅಗ್ರಸ್ಥಾನ

ಕಾಗೋಡು ತಿಮ್ಮಪ್ಪನವರಿಗೆ ದೇವರಾಜ ಅರಸು ಪ್ರಶಸ್ತಿ: ಸಿಹಿ ಹಂಚಿ ಸಂಭ್ರಮ.