ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ಪ್ಲಾನ್: ಇನ್ಮುಂದೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರು..

ಬೆಂಗಳೂರು:  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ಹೊಸ ಪ್ಲಾನ್ ರೂಪಿಸಿದ್ದು, ಇನ್ಮುಂದೆ ಮೇಲ್ವಿಚಾರಕರಾಗಿ ಪ್ರೌಢ ಸಾಲಾ ಶಿಕ್ಷಕರ ಬದಲಾಗಿ ಪ್ರಾಥಮಿಕ ಶಾಲೆ ಶಿಕ್ಷಕರನ್ನ ನೇಮಿಸಲು ಮುಂದಾಗಿದೆ.

ಪರೀಕ್ಷೆಗಳಲ್ಲಿ ನಕಲು ತಡೆಯುವ ಉದ್ದೇಶದಿಂದ ಹಲವು ಕ್ರಮಗಳ ಜಾರಿಗೆ ಮುಂದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಕೊಠಡಿ ಮೇಲ್ವಿಚಾರಕರಾಗಿ ಪ್ರೌಢಶಾಲೆ ಶಿಕ್ಷಕರನ್ನು ಬಳಸಿಕೊಳ್ಳದೆ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಮಾತ್ರ ಕೊಠಡಿ ಮೇಲ್ವಿಚಾರಕರಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ.ಎಸ್.ಎಸ್.ಎಲ್.ಸಿ. ಪರೀಕ್ಷೆಗಳಲ್ಲಿ ಪ್ರೌಢಶಾಲೆ ಶಿಕ್ಷಕರು ಕೊಠಡಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೇರೆ ಬೇರೆ ಶಾಲೆಗಳಿಗೆ ಪ್ರೌಢಶಾಲೆ ಶಿಕ್ಷಕರನ್ನು ನಿಯೋಜಿಸುತ್ತಿದ್ದು, ಶಿಕ್ಷಕರ ಕೊರತೆಯಾದಾಗ ಪ್ರಾಥಮಿಕ ಶಾಲೆ ಶಿಕ್ಷಕರ ಬಳಕೆ ಮಾಡಿಕೊಳ್ಳಲಾಗುತ್ತದೆ.

ನಕಲು ಪ್ರಕರಣಗಳ ತನಿಖೆ ನಡೆಸಿದ ಸಂದರ್ಭದಲ್ಲಿ ಮೇಲ್ವಿಚಾರಕರಾಗಿದ್ದ ಪ್ರೌಢಶಾಲೆ ಶಿಕ್ಷಕರೇ ನಕಲಿಗೆ ವಿದ್ಯಾರ್ಥಿಗಳಿಗೆ ಸಹಕರಿಸಿದ ಪ್ರಕರಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಎಸ್.ಎಸ್.ಎಲ್.ಸಿ. ಪರೀಕ್ಷೆ ಕೊಠಡಿ ಮೇಲ್ವಿಚಾರಕರಾಗಿ ನೇಮಕ ಮಾಡಿಕೊಳ್ಳಲಾಗುವುದು ಎನ್ನಲಾಗಿದೆ.

ಪ್ರೌಢಶಾಲೆ ಶಿಕ್ಷಕರು, ಡಿ ಗ್ರೂಪ್ ನೌಕರರು, ಎಸ್.ಡಿ.ಎ. ಸೇರಿದಂತೆ ಬೋಧಕೇತರ ಸಿಬ್ಬಂದಿಯನ್ನು ಕೂಡ ಅದೇ ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜಿಸದೇ ಬೇರೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ರೂಪುರೇಷೆ ಸಿದ್ದಪಡಿಸುತ್ತಿದೆ ಎಂದು ಹೇಳಲಾಗಿದೆ.

 

Related posts

ಜನಪದದ ಮೂಲ ಸ್ವರೂಪವನ್ನು ಅರ್ಥೈಸಿಕೊಳ್ಳಿ : ಡಿ.ಮಂಜುನಾಥ

ನಾಳೆ ಸಾಹಿತ್ಯ ಗ್ರಾಮದಲ್ಲಿ ಬಹುಭಾಷಾ ಕವಿ ಸಮ್ಮೇಳನ

ಆಧಾರ್ ಲಿಂಕ್ ಮಾಡದ 11.5 ಕೋಟಿ ‘ಪ್ಯಾನ್ ಕಾರ್ಡ್’ ನಿಷ್ಕ್ರಿಯ..