ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಾತ್ಮಾ ಗಾಂಧಿ ಪ್ರತಿಮೆ  ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಎನ್.ಎಸ್.ಯು.ಐ. ಆಗ್ರಹ: ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಕೆ.

ಶಿವಮೊಗ್ಗ:ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆ  ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಕೆ ಮಾಡಿದರು.
ಭಾನುವಾರ ನಡುರಾತ್ರಿ ಜಿಲ್ಲೆಯ ಹೊಳೆಹೊನ್ನೂರು ಸರ್ಕಲ್‍ನಲ್ಲಿದ್ದ ಗಾಂಧಿಪ್ರತಿಮೆಯನ್ನು ದ್ವಂಸಗೊಳಿಸಿ ದೇಶವಿರೋಧಿ ಕೃತ್ಯವನ್ನು ಕೆಲ ಕಿಡಿಗೇಡಿಗಳು ನಡೆಸಿದ್ದಾರೆ. ಈ ಕೃತ್ಯವನ್ನು ಶಿವಮೊಗ್ಗ ಗ್ರಾಮಾಂತರ ಎನ್.ಎಸ್.ಯು.ಐ. ತೀವ್ರವಾಗಿ ವಿರೋಧಿಸುತ್ತದೆ.
ಮಹಾತ್ಮಾಗಾಂಧಿ ವಿಶ್ವಶಾಂತಿಯನ್ನು ಬಯಸಿದವರು. ಹಾಗಾಗಿಯೇ ಭಾರತ ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕಿ ಶಾಂತಿಯ ಮಾರ್ಗದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ರಾಷ್ಟ್ರಪಿತ ಎನಿಸಿಕೊಂಡಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳುವಳಿಯ ಹಿನ್ನಲೆ ತಿಳಿಯದ, ಸಂವಿಧಾನ ಮತ್ತು ಕಾನೂನಿಗ ಬಗ್ಗೆ ಗೌರವ ಇರದ ಕಿಡಿಗೇಡಿಗಳು ನಡುರಾತ್ರಿಯಲ್ಲಿ ರಾಷ್ಟ್ರಪಿತನ ಪ್ರತಿಮೆಯನ್ನು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ.
ಕಿಡಿಗೇಡಿಗಳ ಈ ಕೃತ್ಯದಿಂದ ನಮಗೆ ಆಘಾತವಾದಂತಾಗಿದ್ದು, ಸಂವಿಧಾನ ಮತ್ತು ಕಾನೂನಿಗ ಬಗ್ಗೆ ಗೌರವ ಇಲ್ಲದ ಕಿಡಿಗೇಡಿಗಳ ಕೃತ್ಯ ಕ್ಷಮಿಸಲಾಗದ್ದಾಗಿದೆ. ಸಮಾಜದಲ್ಲಿ ಶಾಂತಿಯನ್ನು ಕದಡುವ ವಿಧ್ವಂಸಕ ಶಕ್ತಿಗಳಿಂದ ಮಾತ್ರ ಇಂತಹ ಹೀನಕೃತ್ಯ ನಡೆಸಲು ಸಾಧ್ಯ.
ಜಿಲ್ಲಾ ರಕ್ಷಣಾಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ದೇಶದ್ರೋಹಿ ಕೃತ್ಯವನ್ನೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು. ರಾಷ್ಟ್ರಪಿತನ ಪ್ರತಿಮೆಗಾದ ಅಪಮಾನದಿಂದಾಗಿ ಹೊಳೆಹೊನ್ನೂರಿನಲ್ಲಿ ಬೂದಿಮುಚ್ಚಿದ ಕೆಂಡದ ವಾತಾವರಣವಿದ್ದು, ಯಾವುದೇ ರೀತಿಯ ಅಶಾಂತಿ ಸೃಷ್ಟಿಯಾಗದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.
ಕಿಡಿಗೇಡಿಗಳನ್ನು ಬಂಧಿಸಿ, ಮುಂದಿನ ದಿನಗಳಲ್ಲಿ ಯಾರೊಬ್ಬರೂ ರಾಷ್ಟ್ರಪಿತ ಸೇರಿದಂತೆ ಯಾವುದೇ ಮಹಾನ್ ನಾಯಕರಿಗೆ ಅಪಮಾನವಾಗುವಂತೆ ನಡೆದುಕೊಳ್ಳದಂತೆ ಎಚ್ಚರ ವಹಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ.
 ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ, ಕಾರ್ಯಧ್ಯಕ್ಷ ರವಿಕಟಿಕೆರೆ, ಶಿವಮೊಗ್ಗ ಗ್ರಾಮಾಂತರ  ಅಧ್ಯಕ್ಷ ಹರ್ಷಿತ್ ಗೌಡ, ನಗರ ಅಧ್ಯಕ್ಷ ಚರಣ್ J ಶೆಟ್ಟಿ, ಧನರಾಜ್, ಚಂದ್ರೋಜಿ ರಾವ್, ಪ್ರದೀಪ,ಅಶೋಕ, ಕೀರ್ತಿ, ಸಾಗರ್, ಸುಜನ್, ನಿಖಿಲಾ, ವಿಷ್ಣು, ಸೂರಜ್ ದೇವಿ ಕುಮಾರ್, ಕಾರ್ತಿಕ್,  ಮಣಿ ಹಾಗೂ ಸಾಕಷ್ಟು ಕಾರ್ಯಕರ್ತರು ಪಾಲ್ಗೊಂಡಿದ್ದರು ಮನವಿ ಸಲ್ಲಿಸಿದರು

Related posts

ಬಿಎಂಟಿಸಿ ಬಸ್ ಡಿಪೋಗೆ ದಿಢೀರ್ ಭೇಟಿ ನೀಡಿ ಹಳೆಯ ದಿನಗಳನ್ನ ಮೆಲುಕು ಹಾಕಿದ ನಟ ಸೂಪರ್ ಸ್ಟಾರ್ ರಜನಿಕಾಂತ್.

ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಚಾಂಪಿಯನ್ 

ಇನ್ಮುಂದೆ ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲಿ ಕನ್ನಡ ಕಡ್ಡಾಯ.