ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ.27ರಂದು ಹಾಲುಮತ ಜನಜಾಗೃತಿ ಸಭೆ, ಪ್ರತಿಭಾ ಪುರಸ್ಕಾರ ಹಾಗೂ ಹಾಲುಮತ ಚೇತನ ಪುರಸ್ಕಾರ ಕಾರ್ಯಕ್ರಮ.

ಶಿವಮೊಗ್ಗ:ಹಾಲುಮತ ಮಹಾಸಭಾ ವತಿಯಿಂದ ಆ.27ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಹಾಲುಮತ ಜನಜಾಗೃತಿ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಾಲುಮತ ಚೇತನ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಹಾಸಭಾದ ರಾಜ್ಯ ಉಪಾಧ್ಯಕ್ಷ ಡಾ.ಪ್ರಶಾಂತ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಸಾನಿಧ್ಯ ಮತ್ತು ಉದ್ಘಾಟನೆಯನ್ನು ಕಾಗಿನೆಲೆ ಶ್ರೀಕ್ಷೇತ್ರದ ಜಗದ್ಗುರು ಶ್ರೀ ನಿರಂಜನಾನಂದಪುರಿ, ಕಾಗಿನೆಲೆ ಶ್ರೀಗಳಾದ ಶ್ರೀ ಈಶ್ವರಾನಂದಪುರಿ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಉಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಪ್ರಸನ್ನಕುಮಾರ್ ಮತ್ತು ಸಮಾಜದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಾಧ್ಯಕ್ಷ ಗಣೇಶ್ ಬಿಳಗಿ ಮಾತನಾಡಿ, ಇದೇ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ, ಕಾಡಾ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ ಅವರಿಗೆ ಹಾಲುಮತ ಚೇತನ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದರ ಜೊತೆಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ಜನಜಾಗೃತಿ ಸಭೆ ಆಯೋಜಿಸಲಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಸಿ. ದಾನೇಶ್, ಸಮಾಜದ ಮುಖಂಡರಾದ ದೊಡ್ಡಪ್ಪ, ವಿನಯ್, ನಾರಾಯಣಸ್ವಾಮಿ, ಸ್ವಪ್ನಾ ಸುರೇಶ್, ಷಡಾಕ್ಷರಪ್ಪ ಮುಂತಾದವರಿದ್ದರು.

Related posts

18ನೇ ರಾಷ್ಟ್ರೀಯ  ಮಟ್ಟದ ಕರಾಟೆ ಪಂದ್ಯಾವಳಿ: ಪದಕಗಳನ್ನು ಗೆದ್ಧ ಕ್ರೀಡಾಪಟುಗಳಿಗೆ ಅಭಿನಂದನೆ.

ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘದಿಂದ ಸದಸ್ಯರಿಗೆ ಶೇ.23ರಷ್ಟು ಲಾಭಾಂಶ ಘೋಷಣೆ.

ಸಿರಿಧಾನ್ಯ ಅಡುಗೆ ಮಾಡುವ ಸ್ಪರ್ಧೆ ಅ. 16ಕ್ಕೆ