ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೆಪ್ಟೆಂಬರ್ 3 ರಂದು  ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ.

ಶಿವಮೊಗ್ಗ:  ಭದ್ರಾವತಿಯ ಕನಕ ಮಂಟಪದಲ್ಲಿ ಸೆಪ್ಟೆಂಬರ್ 3 ರಂದು  ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.
2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :03 /9/ 2023 ರಂದು ಭದ್ರಾವತಿಯ ಕನಕ ಮಂಟಪದಲ್ಲಿ  ಕುಸ್ತಿ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ,  ಅನುದಾನಿತ ಮತ್ತು ಅನುದಾನ ರಹಿತ  ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು  ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ – ಪ್ರಭು,ಜಿ. ಹೆಚ್. ತಾಲ್ಲೂಕು ದೈಹಿಕ ಶಿಕ್ಷಣ ಪರೀಕ್ಷಕರು,9845405859 ಮತ್ತು ದೇವರಾಜ್, ದೈಹಿಕ ಶಿಕ್ಷಣ ಶಿಕ್ಷಕರು. 9591015375 ಗೆ ಸಂಪರ್ಕಿಸಬಹುದು.
  ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಮಕ್ಕಳ ಈ ಕ್ರೀಡಾ ಸ್ಪರ್ಧೆಗಳು ಯಶಸ್ವಿಯಾಗುವಂತೆ ತಮ್ಮಲ್ಲಿ ಕೋರಲಾಗಿದೆ.

Related posts

ಹೆಚ್.ಡಿಕೆ ರಾಜಕೀಯ ಖಳನಾಯಕ: ನಮ್ಮ ಕಾಲದ, ಬಿಜೆಪಿ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸುತ್ತೇನೆ- ಸಿಎಂ ಸಿದ್ಧರಾಮಯ್ಯ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಗೃಹಲಕ್ಷ್ಮಿ ಆಸರೆ- ಗ್ರಾಪಂ ಅಧ್ಯಕ್ಷೆ ಚೈತ್ರ ಮೋಹನ್

ಸರ್ಕಾರಿ ನೌಕರಿಗೆ ಗುಡ್ ನ್ಯೂಸ್ ; ಇನ್ಮುಂದೆ ಆಸ್ತಿ ಖರೀದಿ ಮತ್ತಷ್ಟು ಸರಳ!