ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ: ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

ಬೆಂಗಳೂರು:  ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಿರಣ್ ಎಂಬಾತ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವವರನ್ನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್​ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾಗಿದ್ದರು. ಆದರೆ ಪ್ರತಿಮಾ ಅವರು ಕಿರಣ್​ ನನ್ನು ಕೆಲಸದಿಂದ ತೆಗೆದುಹಾಕಿದ್ದರು.

ಶನಿವಾರ ರಾತ್ರಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ  ಹತ್ಯೆಯಾಗಿತ್ತು. ಕೊಲೆ ಮಾಡಿ ಆರೋಪಿ ಎಸ್ಕೇಪ್ ಆಗಿದ್ದನು.

Related posts

ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್‍ಎಸ್‍ಎಸ್ ಸಹಕಾರಿಯಾಗಿದೆ-ಡಾ. ನಾಗರಾಜ್ ಪರಿಸರ

ಭವಿಷ್ಯವು ಪ್ರಸ್ತುತದಲ್ಲಿ ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ- ಡಾ . ಅರುಣ್ .ಎಂ .ಎಸ್

ಕಾವೇರಿ ನೀರು ವಿಚಾರ: ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಸಿಎಂ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ.