ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಸಿಬ್ಬಂದಿಗಳನ್ನು ಅಮಾನತು ಮಾಡಿ-ಶಶಿಕುಮಾರ್ ಎಸ್. ಗೌಡ ಆಗ್ರಹ

ಶಿವಮೊಗ್ಗ: ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಇಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಭದ್ರಾವತಿ ತಾಲೂಕಿನ ಉಜ್ಜನೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುತ್ತಿಲ್ಲ. ಬೆಳಿಗ್ಗೆ 10 ಗಂಟೆ ಅಥವಾ 11 ಗಂಟೆಯಾದರೂ ವೈದ್ಯರು ಆಸ್ಪತ್ರೆಗೆ ಬರುವುದಿಲ್ಲ. ಈ ಹಿಂದೆಯೂ ಕೂಡ ಈ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ತನಿಖೆ ನಡೆಸಬೇಕು ಎಂದು ನಾವು ದೂರು ಸಲ್ಲಿಸಿದ್ದೆವು. ಆದರೂ ಕೂಡ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದಕ್ಕೆ ಸಾಕ್ಷಿಯಾಗಿ ವೀಡಿಯೋ ಚಿತ್ರೀಕರಣ ಕೂಡ ನಾವು ನೀಡಿದ್ದೆವು ಎಂದು ಮನವಿದಾರರು ತಿಳಿಸಿದರು.
ಆದಕಾರಣ ಕರ್ತವ್ಯ ಲೋಪ ಎಸಗಿರುವ ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ಹಾಗೂ ಹೊಸಮನೆ, ಅಶ್ವತ್ಥನಗರ, ಉಜ್ಜಿನೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಅಮಾನತುಗೊಳಿಸಬೇಕು ಎಂದು ಮನವಿಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಡಿ.ಎಸ್‍ಎಸ್ ಜಿಲ್ಲಾ ಸಂಚಾಲಕಿ ಸುನೀತಾ ರಾಜ್, ರಶ್ಮಿ, ವೆಂಕಟೇಶ್ ಮುಂತಾದವರಿದ್ದರು.

Related posts

ಸಿಎಂ ಮತ್ತು ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.

ಕಾವ್ಯ ಕೇಡು ಸೇಡುಗಳಿಂದ ಮುಕ್ತವಾದುದು-ಕವಯಿತ್ರಿ ಸವಿತಾ ನಾಗಭೂಷಣ

ಸಲಿಂಗ ವಿವಾಹ ಮಾನ್ಯತೆ ವಿಚಾರವಾಗಿ ಸರ್ಕಾರ ಸಮಿತಿ ರಚಿಸಲಿ- ಸುಪ್ರೀಂಕೋರ್ಟ್ ಸಲಹೆ.