ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿವಮೊಗ್ಗ ದಸರಾ: ಅ.16ರಿಂದ ಮಕ್ಕಳ ದಸರಾ ವತಿಯಿಂದ ವಿವಿಧ ಕಾರ್ಯಕ್ರಮ-ರೇಖಾ ರಂಗನಾಥ್

ಶಿವಮೊಗ್ಗ: ನಮ್ಮೂರ ನಾಡ ಹಬ್ಬ ಶಿವಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ವತಿಯಿಂದ ಅ.16, 17 ಹಾಗೂ 18ರಂದು ವಿವಿಧ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಮಕ್ಕಳ ದಸರಾ ಸಮಿತಿ ಅಧ್ಯಕ್ಷೆ ರೇಖಾ ರಂಗನಾಥ್ ತಿಳಿಸಿದರು.
ಅವರು ಇಂದು ಪಾಲಿಕೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅ.16ರ ಬೆಳಿಗ್ಗೆ 10 ಗಂಟೆಗೆ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ 14ರಿಂದ 17 ವರ್ಷ ವಯಸ್ಸಿನ ಮಕ್ಕಳ ರಾಜ್ಯ ಮಟ್ಟದ ಸಬ್ ಜ್ಯೂನಿಯರ್ ಕರಾಟೆ ಪಂದ್ಯಾವಳಿಗಳು, ರಾಜ್ಯ ಮತ್ತು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಆಡಳಿತ ಪಕ್ಷದ ನಾಯಕ ಎಸ್.ಜ್ಞಾನೇಶ್ವರ್ ಪಂದ್ಯಾವಳಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಎಂ ಅಲ್ತಾಫ್ ಪಾಶಾ, ಜಿಲ್ಲಾ ಸೀನಿಯರ್ ಕರಾಟೆ ಮಾಸ್ಟರ್ ಸುರೇಂದ್ರ ಶಾಸ್ತ್ರಿ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.
ಅ.17ರ ಬೆಳಿಗ್ಗೆ 10-30ಕ್ಕೆ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ 6ರಿಂದ 16 ವರ್ಷ ವಯಸ್ಸಿನ ಮಕ್ಕಳ ರಾಜ್ಯ ಮಟ್ಟದ ಕುಡೊ ಮಾರ್ಷಲ್ ಆಟ್ರ್ಸ್ ಪಂದ್ಯಾವಳಿ ಆಯೋಜಿಸಿದ್ದು, ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಕುಡೊ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಅಹ್ಮದ್, ಸೂಡಾ ಮಾಜಿ ಅಧ್ಯಕ್ಷ ಎನ್. ರಮೇಶ್ ಹಾಗೂ ಇನ್ನಿತರರು ಆಗಮಿಸಲಿದ್ದಾರೆ ಎಂದರು.
ಅ.18ರ ಸಂಜೆ 6-30ಕ್ಕೆ ಪ್ರೀಡಂ ಪಾರ್ಕ್‍ನಲ್ಲಿ ನಡೆಯುವ ಮಕ್ಕಳ ದಸರಾ ಸಮಾರೋಪ ಸಮಾರಂಭವನ್ನು ಶಿವಮೊಗ್ಗದವರಾದ ಜ್ಯೂನಿಯರ್ ಡ್ರಾಮಾ ಸೀಸನ್-4ರ ವಿಜೇತೆ ಕು.ರಿಧಿ ಎಸ್., ಸರಿಗಮಪ ಸೀಸನ್-14ರ ಹಿನ್ನೆಲೆ ಗಾಯಕಿ ನೇಹಾ ಆರ್., ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾ ನಾಯ್ಕ ಮಾಜಿ ಶಾಸಕರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ಎಂ. ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್ ಹಾಗೂ ಇನ್ನಿತರರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಶಿವಮೊಗ್ಗದ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.
ನಂತರ ಶಿವಮೊಗ್ಗ ನಗರ ವ್ಯಾಪ್ತಿಯ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಕೊಡಗಿನ ಮ್ಯಾಜಿಕ್ ಸ್ಟಾರ್ ವಿಕ್ರಂ ಶೆಟ್ಟಿರವರಿಂದ ಮ್ಯಾಜಿಕ್ ಶೋ, ಹೆಣ್ಣು ಮಕ್ಕಳಿಂದ ಕರಾಟೆ ಹಾಗೂ ಮಾತನಾಡುವ ಗೊಂಬೆ ಪ್ರದರ್ಶನ ನಡೆಯಲಿದೆ. ಹಾಗೂ ಕ್ರೀಡಾ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಸಮಿತಿಯ ಸದಸ್ಯರಾದ ಆಶಾ ಚಂದ್ರಪ್ಪ, ಆರ್.ಸಿ. ನಾಯಕ್, ಮಂಜುಳಾ ಶಿವಣ್ಣ, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್ ಇನ್ನಿತರರು ಉಪಸ್ಥಿತರಿದ್ದರು.

Related posts

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಅತ್ಯುತ್ತಮ‌ ಸಾಧನೆ: ಪ್ರಧಾನಿ ಮೋದಿ ಶ್ಲಾಘನೆ.

ಗ್ರಾಹಕರಿಗೆ ಶಾಕ್ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ.

ಹೆಚ್.ಡಿಕೆ ರಾಜಕೀಯ ಖಳನಾಯಕ: ನಮ್ಮ ಕಾಲದ, ಬಿಜೆಪಿ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸುತ್ತೇನೆ- ಸಿಎಂ ಸಿದ್ಧರಾಮಯ್ಯ