ಶಿವಮೊಗ್ಗ: ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಎಸ್.ಕೆ. ರಘುವೀರ್ ಸಿಂಗ್ ಪುನರಾಯ್ಕೆಯಾಗಿದ್ದಾರೆ.
ನಿನ್ನೆ ಬೆಂಗಳೂರಿನ ಟೌನ್ ಹಾಲ್ನಲ್ಲಿ ನಡೆದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿ ಅವರ ನೇತೃತ್ವದಲ್ಲಿ ಅವರ ಆದೇಶದಂತೆ ರಾಜ್ಯಾಧ್ಯಕ್ಷರನ್ನಾಗಿ ಶ್ರೀನಿವಾಸ ಜೆ. ಮತ್ತು ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಎಸ್.ಕೆ. ರಘುವೀರ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ರಘುವೀರ್ ಸಿಂಗ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವೆ. ನಾಡು, ನುಡಿ, ಜಲ, ಭಾಷೆ, ಪರಿಸರ ಸಂರಕ್ಷಣೆ ಯ ಜೊತೆಗೆ ಜನರ ಧ್ವನಿಯಾಗಿ ಕೆಲಸ ಮಾಡುವೆ ಎಂದಿದ್ದಾರೆ.
ತಮ್ಮನ್ನು ಆಯ್ಕೆ ಮಾಡಿದ ಸಂಸ್ಥಾಪಕ ಅಧ್ಯಕ್ಷ ಗುಣರಾಜ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷ ಶ್ರೀನಿವಾಸ ಜೆ. ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.