ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ರೈತರಿಗೆ ಶಾಕ್: ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂ. ನೀರು ಬಿಡುವಂತೆ ಆದೇಶ..

ಬೆಂಗಳೂರು: ಇಂದು ದೆಹಲಿಯ ಸಿಡಬ್ಲ್ಯೂಎಮ್‌ಎ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂ ಸೆಟ್ ನೀರು ಹರಿಸುವಂತೆ ಆದೇಶಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಸಿಡಬ್ಲ್ಯೂಎಮ್‌ಎ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಳಿಕ ಈ ಆದೇಶ ನೀಡಲಾಗಿದೆ.

ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸುವಂತೆ ಆದೇಶಿಸಿದೆ. ಕೇವಲ 3 ಸಾವಿರ ಕ್ಯೂಸೆಕ್ ನೀರು ಬಿಡುವುದರಿಂದ ಭತ್ತದ ಬೆಳೆ ಹಾಳಾಗುತ್ತವೆ ಅದರಿಂದ ಹೆಚ್ಚುವರಿ ನೀರು ಬಿಡುವಂತೆ ತಮಿಳುನಾಡು ಮನವಿ ಸಲ್ಲಿಸಿತ್ತು.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆಗೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ತಮಿಳುನಾಡಿಗೆ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಮಂಡ್ಯದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

 

Related posts

ತನಿಖಾ ಸಂಸ್ಥೆ ಪ್ರತಿಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ: ಜಾರಿ ನಿರ್ದೇಶನಾಲಯಕ್ಕೆ(ED) ಛೀಮಾರಿ ಹಾಕಿದ ಸುಪ್ರೀಂಕೋರ್ಟ್

ಸನ್ಮಾರ್ಗದಲ್ಲಿ ಜೀವನ ರೂಪಿಸಿಕೊಳ್ಳಲು ಸ್ಕೌಟ್ ಸಹಕಾರಿ- ವೈ.ಗಣೇಶ್

1 ಸೆಕೆಂಡ್ ನಲ್ಲಿ 150 ಮೂವಿ ಡೌನ್ಲೋಡ್ ಮಾಡುವ ಸಾಮರ್ಥ್ಯದ ವಿಶ್ವದ ಅತ್ಯಂತ ವೇಗದ ಇಂಟರ್ನೆಟ್ ಪ್ರಾರಂಭ.