ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಕೆನಡಾ ವಿಚಾರ: ದೇಶದ ಹಿತಾಸಕ್ತಿ ಅತಿಮುಖ್ಯ- ಕೇಂದ್ರ ಸರ್ಕಾರದ ಬೆನ್ನಿಗೆ ನಿಂತ ಕಾಂಗ್ರೆಸ್.

ನವದೆಹಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.

ಏಟಿಗೆ ಏದಿರೇಟು ಎಂಬಂತೆ ಭಾರತ ಸರ್ಕಾರ ಕೆನಡಾದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ. ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಇಂದು ಕರೆಸಿ, ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವ ಭಾರತ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಯಿತು. ಈ ವೇಳೆ ಮುಂದಿನ ಐದು ದಿನದೊಳಗೆ ಭಾರತವನ್ನು ತೊರೆಯುವಂತೆ ಸಂಬಂಧಪಟ್ಟ ರಾಜತಾಂತ್ರಿಕರಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ತಿಕ್ಕಾಟದ ಮಧ್ಯೆ ದೇಶದ ಹಿತಾಸಕ್ತಿ ಮತ್ತು ಕಾಳಜಿಗಳನ್ನು ಪ್ರಮುಖವಾಗಿ ಇಡಬೇಕು ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ರಾಜಿಯಾಗದಂತೆ ಇರಬೇಕು ಎಂದು ಕಾಂಗ್ರೆಸ್ ಹೇಳಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬೆನ್ನಿಗೆ ಕಾಂಗ್ರೆಸ್ ನಿಂತಿದೆ.  ಜೂನ್ ನಲ್ಲಿ ನಡೆದ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ‘ಸಂಭಾವ್ಯ’ ಭಾರತೀಯ ಸಂಬಂಧವನ್ನು ಉಲ್ಲೇಖಿಸಿ ಕೆನಡಾ ಭಾರತೀಯ ಅಧಿಕಾರಿಯೊಬ್ಬರನ್ನು ಆ ದೇಶವನ್ನು ತೊರೆಯುವಂತೆ ಕೇಳಿದ ಕೆಲವೇ ಗಂಟೆಗಳ ನಂತರ ಕೆನಡಾದ ರಾಜತಾಂತ್ರಿಕರನ್ನು ಹೊರಹಾಕುವುದಾಗಿ ಭಾರತ ಘೋಷಿಸಿತು.

ಇದೀಗ ಈ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಕೇಂದ್ರ ಸರ್ಕಾರದ ನಡೆಯನ್ನು ಸಮ್ಮತಿಸಿರುವ ಕಾಂಗ್ರೆಸ್ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ರಾಜಿಯಾಗದಂತೆ ಇರಬೇಕು ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಭಯೋತ್ಪಾದನೆ ಬೆದರಿಕೆಯೊಡ್ಡಿದಾಗ, ಭಯೋತ್ಪಾದನೆಯ ವಿರುದ್ಧ ನಮ್ಮ ದೇಶದ ಹೋರಾಟವು ರಾಜಿಯಾಗದಿರಬೇಕು. ನಮ್ಮ ದೇಶದ ಹಿತಾಸಕ್ತಿ ಮತ್ತು ಕಾಳಜಿಗಳನ್ನು ಎಲ್ಲಾ ಸಮಯದಲ್ಲೂ ಪ್ರಮುಖವಾಗಿ ಇಡಬೇಕು ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತೀಯ ಸರ್ಕಾರಿ ಏಜೆಂಟರುಗಳು ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕನ ಹತ್ಯೆಯ ನಡುವಿನ ‘ಸಂಭಾವ್ಯ ಸಂಬಂಧ’ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರ ಹೇಳಿಕೆಯನ್ನು ಭಾರತವು ‘ಆಧಾರರಹಿತ’ ಮತ್ತು ‘ಪ್ರೇರಣೆ’ ಎಂದು ಸಂಪೂರ್ಣವಾಗಿ ತಿರಸ್ಕರಿಸಿದೆ ಮತ್ತು ಕೆನಡಾದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ ವಿರೋಧಿ ಅಂಶಗಳ ವಿರುದ್ಧ ತ್ವರಿತ ಕಾನೂನು ಕ್ರಮವನ್ನು ಕೋರಿದೆ.

ಕೆನಡಾದ ಸಂಸತ್ತಿನಲ್ಲಿ ಟ್ರುಡೊ ಹೇಳಿಕೆ ನೀಡಿದ ನಂತರ, ಅವರ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಅವರು ಉನ್ನತ ಭಾರತೀಯ ರಾಜತಾಂತ್ರಿಕರನ್ನು ಕೆನಡಾದಿಂದ ಹೊರಹಾಕಿದ್ದಾರೆ. ಕೆನಡಾದ ಬ್ರಾಡ್ಕಾಸ್ಟರ್ ಸಿಬಿಸಿ ನ್ಯೂಸ್ ಪ್ರಕಾರ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮುಖ್ಯಸ್ಥ ಪವನ್ ಕುಮಾರ್ ರೈ ರಾಜತಾಂತ್ರಿಕರಾಗಿದ್ದಾರೆ ಎಂದು ಜೋಲಿಯ ಕಚೇರಿ ತಿಳಿಸಿದೆ.

ಭಾರತದಿಂದಲೂ ಕ್ರಮ ಅತ್ತ ಕೆನಾಡ ಸರ್ಕಾರ ಭಾರತದ ರಾಯಭಾರಿಯನ್ನು ಉಚ್ಚಾಟಿಸಿದ ಬೆನ್ನಲ್ಲೇ ಭಾರತ ಸರ್ಕಾರ ಕೂಡ ಪ್ರತಿಕ್ರಮ ಕೈಗೊಂಡಿದ್ದು, ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನೂ ಕೂಡ ಉಚ್ಛಾಟನೆ ಮಾಡಿದ್ದು, ಇನ್ನು ಐದು ದಿನದಲ್ಲಿ ಕೆನಡಾಗೆ ವಾಪಸಾಗುವಂತೆ ಆದೇಶಿಸಿದೆ.

 

Related posts

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ದೇವರು ಒಳ್ಳೆಯದು ಮಾಡಲಿ-ಸಚಿವ ಮಧು ಬಂಗಾರಪ್ಪ

ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪದ  ಹಲ್ಲೆ ಆರೋಪ: ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು.