ಕನ್ನಡಿಗರ ಪ್ರಜಾನುಡಿ
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಕಂದಕಕ್ಕೆ ಸೇನಾ ವಾಹನ ಪಲ್ಟಿ, 9 ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಪ್ರಧಾನಿ, ರಾಷ್ಟ್ರಪತಿಗಳು..

ಬೆಂಗಳೂರು: ಲಡಾಖ್’’ನ ಲೇಹ್ ನಗರದಲ್ಲಿ ಸೇನಾ ವಾಹನ ಕಂದಕಕ್ಕೆ ಪಲ್ಟಿಯಾದ ಪರಿಣಾಮ 9 ಯೋಧರು ಮೃತಪಟ್ಟಿದ್ದಾರೆ.

ಮತ್ತೊಬ್ಬ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಡಖ್ ನ ನ್ಯೋಮಾದ ಕೆರೆಯಲ್ಲಿ ಈ ಅಪಘಾತ ಸಂಭವಿಸಿದೆ.

ಯೋಧರ ಪಡೆ ಕರು ಗ್ಯಾರಿಸನ್ನಿಂದ ಲೇಹ್ ಬಳಿ ಇರುವ ಕಯಾರಿ ಪ್ರದೇಶಕ್ಕೆ ಹೋಗುತ್ತಿರುವಾಗ ಸುಮಾರು 7 ಕಿ.ಮೀ ದೂರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದಿದೆ.

ಘಟನೆ ಕುರಿತಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಟ್ವೀಟ್​ ಮಾಡಿದ್ದು, ಲಡಾಖ್ ನ ಲೇಹ್ ಬಳಿ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ.

 

Related posts

ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ.

ರೈತರ ಸಾಲ ವಸೂಲಾತಿಗಾಗಿ ಕೆನರಾ ಬ್ಯಾಂಕ್‍ ದೌರ್ಜನ್ಯ ಆರೋಪ : ರಾಜ್ಯ ರೈತ ಸಂಘ ,ಹಸಿರು ಸೇನೆ ಪ್ರತಿಭಟನೆ.

ಶಿಕ್ಷಣ ಪ್ರೇಮಿ, ಸಾಂಸ್ಕೃತಿಕ ರಾಯಭಾರಿ, ಸಜ್ಜನ ರಾಜಕಾರಣಿ ಡಾ.ಮಂಜುನಾಥ ಭಂಡಾರಿಯವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ….