ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಶಾಸಕರಿಗೆ ಶಾಕ್ ನೀಡಿದ್ದು, ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದೆ.
ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಶಿಫ್ಟ್ ಮಾಡಿದೆ ಎನ್ನಲಾಗಿದೆ. ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕುಣಿಗಲ್ ಗೆ ಶಿಫ್ಟ್ ಮಾಡಿದೆ. ಈ ಹಿನ್ನೆಲೆ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ಹೊರ ಹಾಕಿದ್ದಾರೆ.