ಶಿವಮೊಗ್ಗ: ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಮತ್ತು ಸೊರಬ ವಿಧಾನ ಸಭಾ ಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ಮೂವರು ಆಪ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಟಿ. ನೇತ್ರಾವತಿ ನೇತೃತ್ವದಲ್ಲಿ ಚಂದ್ರಶೇಖರ್ ಹಾಗೂ ಮಂಜುನಾಥ್ ಅವರು ನ.19ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಗಣ್ಯರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಯಾವುದೇ ಷರತ್ತುಗಳಿಲ್ಲದೆ ಮತ್ತು ಕರ್ನಾಟಕದಲ್ಲಿ ಆಪ್ಗೆ ಭವಿಷ್ಯವಿಲ್ಲವಾದ್ದರಿಂದ ನಾವು ಕಾಂಗ್ರೆಸ ಪಕ್ಷ ಸೇರುತ್ತಿದ್ದೇವೆ ಎಂದು ನೇತ್ರಾವತಿ ತಿಳಿಸಿದ್ದಾರೆ.