ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ  ಅರಣ್ಯಾಧಿಕಾರಿಗಳಿಂದ  ಪರಿಶೀಲನೆ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೇಂಜಿಂಗ್ ಸ್ಟಾರ್  ದರ್ಶನ್, ನಟ ಹಾಗೂ ಸಂಸದ ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ  ಅರಣ್ಯಾಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ನಟ ದರ್ಶನ್ ನಿವಾಸದಲ್ಲಿ ಎರಡು ತಂಡದಿಂದ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ.

ಹಾಗೆಯೇ ಉಗುರು ಪೆಂಡೆಂಟ್ ಕೇಸ್ ನಟ ಜಗ್ಗೇಶ್ ಗೂ ಸಂಕಷ್ಟ ಎದುರಾಗಿದ್ದು, ನಟ ಜಗ್ಗೇಶ್ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ.ಸದ್ಯ ರಾಕ್ ಲೈನ್ ವೆಂಕಟೇಶ್ ವಿದೇಶ ಪ್ರವಾಸದಲ್ಲಿದ್ದಾರೆ. ರಾಕ್ ಲೈನ್ ವೆಂಕಟೇಶ್ ಗೆ ಅಧಿಕಾರಿಗಳು  ನೋಟಿಸ್ ನೀಡಿದ್ದಾರೆ. ರಾಜಾಜಿನಗರದಲ್ಲಿನ ನಿವಾಸದಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನೋಟಿಸ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

Related posts

ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ಮುಖ್ಯ-ಪೂರ್ಣಿಮಾ ಸುನೀಲ್ 

ಶಕ್ತಿ ಯೋಜನೆಗೆ ನಿರ್ವಾಹಕರು ಪಲಿಪಶು: 300 ಕಂಡಕ್ಟರ್ ಗಳು ಸಸ್ಪಂಡ್

ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಮಾರಾಟಗಾರರಿಗೆ ಶಾಕ್: ಈ ನಿಯಮ ನಿಬಂದನೆ ಪಾಲನೆ ಕಡ್ಡಾಯ..