ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದುರಂತ ಅಂತ್ಯ:  ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ​ಗೆ ಕೂದಲು ಸಿಲುಕಿ ಮಹಿಳೆ ಸಾವು.

 

ಬೆಂಗಳೂರು: ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ ಗೆ ಸಿಲುಕಿ ಕೂದಲು ಸಿಲುಕಿ ಮಹಿಳೆಯ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ದುರ್ಘಟನೆ  ನಡೆದಿದೆ. 33 ವರ್ಷದ ಶ್ವೇತಾ ಮೃತಪಟ್ಟ ಮಹಿಳೆ. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಶ್ವೇತಾ ಕೆಲಸ ಮಾಡುತ್ತಿದ್ದರು.

ಈ ನಡುವೆ ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್​ ಒಳಗೆ ಮಹಿಳೆ ಶ್ವೇತಾ ಬಗ್ಗಿದಾಗ ಜಡೆ ಗ್ರೇಡರ್ ಗೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್ ​ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದ್ದು,  ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಳೆ ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆ- ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್

ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ- ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.

ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ನಿಶ್ಚಿತ-ಕಿರಣ್ ಎ ವಸಂತ್