ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತ ಎಂಎಲ್‌ಸಿ ರುದ್ರೇಗೌಡರಿಗೆ ಸನ್ಮಾನ.

ಶಿವಮೊಗ್ಗ: ಕೈಗಾರಿಕಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿ ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತ ಭಾಜನರಾದ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಮಾಚೇನಹಳ್ಳಿ ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕೈಗಾರಿಕಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಉದ್ಯೋಗ ಸೃಷ್ಠಿಸಿ ಸಾವಿರಾರು ಕುಟುಂಬಗಳಿಗೆ ಉದ್ಯೋಗ ನೀಡಿರುವ ಎಸ್.ರುದ್ರೇಗೌಡರು ಸಮಾಜಮುಖಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ನೂರಾರು ಯುವ ಸಾಧಕರಿಗೆ ಸ್ಫೂರ್ತಿಯಾಗಿದ್ದಾರೆ.

ಇತ್ತೀಚೆಗೆ ಎಫ್‌ಕೆಸಿಸಿಐ ವತಯಿಂದ ಕೈಗಾರಿಕಾ ವಲಯದಲ್ಲಿ ನೀಡಲಾಗುವುದು ವಿಶೇಷ ಪುರಸ್ಕಾರ ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತರಾಗಿ ಸನ್ಮಾನಿತರಾಗಿದ್ದಾರೆ. ಕೈಗಾರಿಕಾ ಕ್ಷೇತ್ರದ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಎಸ್.ರುದ್ರೇಗೌಡ ಅವರಿಗೆ ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.

ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ರಮೇಶ್ ಹೆಗಡೆ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಎಸ್..ರುದ್ರೇಗೌಡರು ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊಸ ಉದ್ಯಮಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಆದರ್ಶವಾಗಿದ್ದಾರೆ. ಕೈಗಾರಿಕಾ ಉದ್ಯಮಿಗಳಿಗೆ ಅಗತ್ಯ ಸಹಕಾರ ನಿರಂತರ ಆಗಿರಬೇಕು ಎಂದು ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಆತ್ಮೀಯವಾಗಿ ಅಭಿನಂದಿಸಿದರು. ಸಂಸ್ಥೆಯ ಖಜಾಂಚಿ ಅಶೋಕ್ ಡಿ.ಬಿ., ಉಪಾಧ್ಯಕ್ಷ ಡಿ.ಜಿ.ಬೆನಕಪ್ಪ, ಅಜಿತ್ ಹೆಗಡೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಂದೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ ಭವಿಷ್ಯ..

ಕರಾಳ ದಿನ: ಮುಂಬೈ 26 \11 ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ…..

ಚಂದ್ರಯಾನ ಯಶಸ್ವಿಯಾಗಲು ಶಿವಮೊಗ್ಗ ಯೋಗಪಟುಗಳ ಶುಭಹಾರೈಕೆ