ಕನ್ನಡಿಗರ ಪ್ರಜಾನುಡಿ
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ವಾಟ್ಸಪ್ ಸ್ಟೇಟಸ್  : ಮಹಿಳಾ ಕಾನ್ಸ್​​ಟೇಬಲ್ ಸಸ್ಪೆಂಡ್.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್​​​ ವಿರುದ್ಧ ಸ್ಟೇಟಸ್​​​ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಕಾನ್ಸ್​​ಟೇಬಲ್​​​ ಅಮಾನತು ಮಾಡಲಾಗಿದೆ.

ಕಡೂರು ಪೊಲೀಸ್  ಠಾಣೆಯ ಮಹಿಳಾ ಕಾನ್ಸ್​​ಟೇಬಲ್  ಲತಾ ಅಮಾನತಾದವರು.  ಶಾಸಕ ಆನಂದ್  ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮಹಿಳಾ ಕಾನ್ಸ್ ಟೇಬಲ್ ಲತಾ, ನನಗೆ ಏನಾದರೂ ತೊಂದರೆಯಾದರೆ ಕಡೂರು ಶಾಸಕ ಕಾರಣ. ಕಡೂರು ಶಾಸಕರಿಗೆ ನನ್ನ ಧಿಕ್ಕಾರ ಎಂದು ವಾಟ್ಸ್​​​ಆ್ಯಪ್ ಸ್ಟೇಟಸ್​​​ನಲ್ಲಿ ಉಲ್ಲೇಖಿಸಿದ್ದರು.

ಈ ಮಧ್ಯೆ, ಶಾಸಕ ಆನಂದ್ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಮಹಿಳಾ ಕಾನ್ಸ್ ಟೇಬಲ್ ಲತಾರನ್ನ ಅಮಾನತು ಮಾಡಿ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರು ಆದೇಶ ಹೊರಡಿಸಿದ್ದಾರೆ.

Related posts

ಸಮಸ್ತ ಇಸ್ರೋ ತಂಡಕ್ಕೆ ತುಂಬು ಹೃದಯದ ಅಭಿನಂದನೆಗಳು…ರಮೇಶ್ ಶೆಟ್ಟಿ ಶಂಕರಘಟ್ಟ

ವಿನೋಬನಗರ ಠಾಣೆಗೆ ಹಾಜರಾಗಿ ನೋಟಿಸ್ ಗೆ ಉತ್ತರಿಸಿದ ಚಕ್ರವರ್ತಿ ಸೂಲಿಬೆಲೆ.

ತಿಂಗಳಾಂತ್ಯದಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ: ಪರ-ವಿರೋಧ ಚರ್ಚೆ ಮುನ್ನೆಲೆಗೆ..