ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ: ಬಿಎಸ್ ವೈ ವಿರುದ್ಧ ವೈ.ಬಿ. ಚಂದ್ರಕಾಂತ್ ಕಿಡಿ

ಶಿವಮೊಗ್ಗ: ತಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ವೈ.ಬಿ. ಚಂದ್ರಕಾಂತ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಬರ ಪರಿಹಾರದ ಯೋಜನೆಗಳನ್ನು ರೂಪಿಸದೆ ಕೈಚೆಲ್ಲಿ ಕುಳಿತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಮಾಡಿರುವ ಆರೋಪ ತಮ್ಮ ಮಕ್ಕಳ ರಾಜಕೀಯ ಭವಿಷ್ಯವನ್ನು ಮತ್ತಷ್ಷುಗಟ್ಟಿ ಮಾಡುವ ತಂತ್ರವಾಗಿದೆ ಎಂದರು.
ರಾಜ್ಯದಲ್ಲಿ ಮಳೆ ಬರದೆ ಬರಗಾಲ ಆವರಿಸಿರುವುದು ನಿಜವಾದರೂ ಜನಸಾಮಾನ್ಯರ ಮತ್ತು ರೈತರ ಹಿತವನ್ನು ಕಾಪಾಡಲು ರಾಜ್ಯಸರ್ಕಾರ ತ್ವರಿತವಾಗಿ ಈಗಾಗಲೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿದೆ. ಅದೆರೀತಿ ರಾಜ್ಯದ ಜಿಲ್ಲಾಡಳಿತಗಳಿಗೆ ಸಮರೋಪಾದಿಯಲಿ ್ಲಕುಡಿಯುವ ನೀರು ಮತ್ತು ಇನ್ನಿತರೆ ಪರಿಹಾರ ಕಾರ್ಯಗಳ ಕೈಗೊಳ್ಳುವಂತೆ ಕಟ್ಟುನಿಟ್ಟಿನಆದೇಶ ನೀಡಲಾಗಿದೆ ಎಂದರು.
ಬಿ.ಎಸ್.ಯಡಿಯೂರಪ್ಪರವರು ಮುಖ್ಯಮಂತ್ರಿ ಆಗಿದ್ದಾಗ ಗೊಬ್ಬರ ಕೇಳಿ ಹೋರಾಟಕ್ಕಿಳಿದ ರೈತರ ಮೇಲೆ ಗೋಲಿಬಾರ್ ನೆಡೆದು ರೈತರು ಸಾವು ಕಂಡಿದ್ದರು, ಉತ್ತರಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಿಂದ ಪ್ರವಾಹ ಉಂಟಾಗಿ ಸಾವಿರಾರು ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಾಗ ಬಿ.ಎಸ್.ಯಡಿಯೂರಪ್ಪರವರಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಮೇಲೆ ಏಕೆ ಕನಿಕರತೋರಿಸಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಐಟಿ ಇಲಾಖೆಯ ದಾಳಿಯ ವೇಳೆ ದೊರೆತಿರುವ ಕೋಟ್ಯಂತರ ಹಣ ಕಾಂಗ್ರೆಸ್ ಪಕ್ಷವು ಪಂಚ ರಾಜ್ಯಗಳ ಚುನಾವಣೆಗೆ ಸಂಗ್ರಹಿಸಿಟ್ಟರುವ ಹಣವೆಂದು ಕೇಂದ್ರದ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿರುವುದು ಹಾಸ್ಯಾಸ್ಪದ ಎಂದಿದ್ದಾರೆ.

Related posts

ಬೆಂಗಳೂರು ಬಂದ್ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟಗಳು.

ಸಮೂಹ ಸಂವಹನದಿಂದ ನಾವೀನ್ಯ ಯೋಜನೆಗಳು ಸಾಧ್ಯ-ಡಾ.ಶ್ರೀಕಂಠೇಶ್ವರಸ್ವಾಮಿ

ಸಂವಿಧಾನ ವಿರೋಧಿ ಶಕ್ತಿಗಳಿಂದ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ; ಎಚ್ಚರಿಕೆ ಮತ್ತು ಜಾಗೃತಿಗೆ ಸಿಎಂ ಸಿದ್ದರಾಮಯ್ಯ ಕರೆ.