ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರ ಬೀಳಿಸುವ ನಿಮ್ಮ ಷಡ್ಯಂತ್ರ ಫಲಿಸುವುದಿಲ್ಲ-ಬಿಜೆಪಿಗೆ  ಡಿಸಿಎಂ ಡಿ.ಕೆ ಶಿವಕುಮಾರ್  ಟಾಂಗ್

 

ಬೆಂಗಳೂರು:  ಕಾಂಗ್ರೆಸ್ ಶಾಸಕರನ್ನ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಕುರಿತು ಬಹಳ ದೊಡ್ಡ ಷಡ್ಯಂತ್ರ ನಡೆಯುತ್ತಿದೆ.  ಆದರೆ ಯಾವುದೇ ಫಲ ಸಿಗಲ್ಲ ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ’ ಎಂದು ತಿಳಿಸಿದರು.

‘ಪಕ್ಷದ ಶಾಸಕ ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡಬಾರದು. ಪಕ್ಷದ ವಿಚಾರವಾಗಿ ಹೇಳಿಕೆ ನೀಡಿದರೆ ಅಂಥವರಿಗೆ ನೊಟೀಸ್ ನೀಡಲಾಗುವುದು’ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

Related posts

ಸರ್ಕಾರದಿಂದ ಅಬಕಾರಿ ತೆರಿಗೆ ಹೆಚ್ಚಳ : ಮದ್ಯ ಮಾರಾಟದಲ್ಲಿ ಶೇ.10 ರಿಂದ 15ರಷ್ಟು ಕುಸಿತ.

ಕಾವೇರಿ ನದಿ ನೀರು ವಿವಾದ  ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ: ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಲು ಸರ್ಕಾರ ಸಜ್ಜು.

ಸ್ವಾಮೀಜಿ ಬಂಧನವಾಗಲಿ ಎಲ್ಲ ಸತ್ಯ ಹೊರಗೆ ಬರುತ್ತೆ-   ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಚೈತ್ರ ಕುಂದಾಪುರ