ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತುಂಗಾ ಜಲಾಶಯ ಬಳಿ ಯುವಕ ನೀರು ಪಾಲು.

ಶಿವಮೊಗ್ಗ: ಭದ್ರಾವತಿಯ ಶರತ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ತುಂಗಾ ಜಲಾಶಯ ಬಳಿ ಯುವಕ ನೀರು ಪಾಲಾಗಿದ್ದಾನೆ.
ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಬಳಿ ನಿನ್ನೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮಿಳ್ಳಘಟ್ಟದ ಹರೀಶ್(22) ನೀರು ಪಾಲಾದ ಯುವಕ ಎಂದು ಹೇಳಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವಕನಿಗಾಗಿ ಹುಡುಕಾಟ ನಡೆಸಲಾಗಿದೆ. ಯಾಂತ್ರಿಕ ಬೋಟ್ನಲ್ಲಿ ಯುವಕನಿಗಾಗಿ ಹುಡುಕಾಟ ನಡೆದಿದ್ದು, ಸ್ಥಳೀಯ ಮೀನುಗಾರರು, ಈಜುಗಾರರು ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ.
ಡ್ಯಾಂ ಪ್ರವೇಶಕ್ಕೆ ನಿಷೇಧ ಹಿನ್ನೆಲೆ ಚಾನಲ್ ಪಕ್ಕದ ದಾರಿಯಲ್ಲಿ ಸ್ನೇಹಿತರು ಹೋಗಿದ್ದು, ಅಲ್ಲಿನ ಕಾಮಗಾರಿ ನಡೆಯುತ್ತಿರುವ ಸೇತುವೆ ಬಳಿ ಹೋಗಿದ್ದ ವೇಳೆ ಹರೀಶ್ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

ಸರ್ಕಾರಿ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿಗೆ ಮುಂದಾದ ಸರ್ಕಾರ.

ಜೆಡಿಎಸ್ ವತಿಯಿಂದ ನ.22ರಂದು ಪ್ರತಿಭಟನಾ ಮೆರವಣಿಗೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಿಡುಗಡೆ